ಉಡುಪಿ | ಸೌಹಾರ್ದತೆ ಉಳಿವಿಗಾಗಿ ಮಾನಸ ಸರಪಳಿ; ಭಿತ್ತಿಪತ್ರ ಬಿಡುಗಡೆ

Date:

Advertisements

ದ್ವೇಷ ಭಾಷಣ, ಮತೀಯ ದ್ವೇಷ, ಅಸ್ಪೃಶ್ಯತೆ, ಜಾತೀಯ ದಮನ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಅಸಮಾನತೆಗಳ ತೀವ್ರತೆಯು ಸೌಹಾರ್ದ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶತಮಾನಗಳ ಇತಿಹಾಸವುಳ್ಳ ಕರ್ನಾಟಕದ ಸೌಹಾರ್ದ ಪರಂಪರೆ ಹಾಗೂ ಜನ ಸಂಸ್ಕೃತಿಯನ್ನು ಗುರುತಿಸಿ ಅದನ್ನು ಮುನ್ನೆಲೆಗೆ ತರುವ ಐತಿಹಾಸಿಕ ಅವಶ್ಯಕತೆ ಉಂಟಾಗಿದೆ ಎಂದು ಸೌಹಾರ್ದ ಮಾನವ ಸರಪಳಿ ಅಭಿಯಾನದ ಸಂಘಟಕ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.

ಗಾಂಧಿ ಹುತಾತ್ಮರಾದ ಜನವರಿ 30ರಂದು ಸಂಜೆ 4.40ಕ್ಕೆ ಉಡುಪಿಯ ಕ್ಲಾಕ್‌ ಟವರ್ ಬಳಿ ಸೌಹಾರ್ದ ಕರ್ನಾಟಕ ಸಂಘಟನೆಯು ಸೌಹಾರ್ದ ಮಾನವ ಸರಪಳಿ ಅಭಿಯಾನವನ್ನು ಆಯೋಜಿಸಿದೆ. ಅಭಿಯಾನದ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಪ್ರಸ್ತುತ ಸಮಾಜದಲ್ಲಿ ಸ್ನೇಹಪರತೆ, ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾಳಜಿಯುಳ್ಳವರೆಲ್ಲಾ ಒಂದೆಡೆ ಕಲೆತು, ಕುಳಿತು ಕಾರ್ಯಯೋಜನೆ ರೂಪಿಸಿ, ಸೌಹಾರ್ದತೆಯ ಸಂದೇಶವನ್ನು ಜನರ ನಡುವೆ ನಿರಂತರ ಕೊಂಡೊಯ್ಯುವ ಹಲವು ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ” ಎಂದರು.

Advertisements

ಈ ಸಂದರ್ಭದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯ ಹೊಣೆಗಾರರಾದ ಬಾಲಕೃಷ್ಣ ಶೆಟ್ಟಿ, ಸುಂದರ್ ಮಾಸ್ತರ್, ಪ್ರೊ.ಫಣಿರಾಜ್, ಡಾ‌.ಜೆರಾಲ್ಡ್ ಪಿಂಟೋ,ರೊನಾಲ್ಡ್, ಸಂಜೀವ್ ಬಳ್ಕೂರು, ಶಶಿಧರ್, ಕವಿರಾಜ್, ಮೋಹನ್ ಮತ್ತು ಸಂತೋಷ್ ಕರ್ವೆಲೋ, ಇದ್ರಿಸ್ ಹೂಡೆ, ಅಬ್ದುಲ್ ಅಝೀಝ್ ಉದ್ಯಾವರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X