ಸಂಧ್ಯಾಕಾಲದಲ್ಲಿ ಜಗದೀಶ್ ಶೆಟ್ಟರ್ ‘ರಾಜಕೀಯ ಆತ್ಮಹತ್ಯೆ’ : ಸಚಿವ ದಿನೇಶ್ ಗುಂಡೂರಾವ್

Date:

Advertisements

ಯಾವುದೇ ಸುಳಿವು ನೀಡದೆ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯರಾಗಿದ್ದ ಜಗದೀಶ್ ಶೆಟ್ಟರ್ ಅವರು ದಿಢೀರಾಗಿ ದೆಹಲಿಯಲ್ಲಿ ಮತ್ತೆ ಬಿಜೆಪಿಗೆ ಸೇರಿಕೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಬಹಳಷ್ಟು ಬೆಳವಣಿಗೆಗಳಾಗುತ್ತಿವೆ. ಬಿಜೆಪಿ ಪಾಳಯ ಹರ್ಷದಲ್ಲಿದ್ದರೆ, ಕಾಂಗ್ರೆಸ್ ಪಾಳಯ ಶಾಕ್‌ಗೊಳಗಾಗಿದೆ.

ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರಿಕೊಂಡ ಬಗ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಆತ್ಮಗೌರವ ಕಳೆದುಕೊಂಡ ಬಳಿಕವೂ ಬಿಜೆಪಿಗೆ ಮರಳಿ ಹೋಗುವ ದುಸ್ಥಿತಿ ಶೆಟ್ಟರ್ ಅವರಿಗೆ ಬರಬಾರದಿತ್ತು. ಸಂಧ್ಯಾಕಾಲದಲ್ಲಿ ಜಗದೀಶ್ ಶೆಟ್ಟರ್ ‘ರಾಜಕೀಯ ಆತ್ಮಹತ್ಯೆ’ ಮಾಡಿಕೊಂಡಿದ್ದಾರೆ” ಎಂದು ಟಾಂಗ್ ನೀಡಿದ್ದಾರೆ.

“ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಪಕ್ಷ ಅವರಿಗೆ ವಿಧಾನಸಭಾ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತ್ತು‌. ಇದಕ್ಕಿಂತ ಹೆಚ್ಚಿನ ಗೌರವ ಕೊಡಲು ಇನ್ನೇನು ಸಾಧ್ಯ?” ಎಂದು ಸಚಿವರು ಕೇಳಿದ್ದಾರೆ.

Advertisements

“ಈಗ ಅವಮಾನ ಮಾಡಿದ ಪಕ್ಷಕ್ಕೇ‌ ಮರಳಿ ಹೋಗಿದ್ದಾರೆ‌. ಶೆಟ್ಟರ್‌ ಆತ್ಮಗೌರವ ಕಳೆದುಕೊಂಡು ಬಿಜೆಪಿಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು” ಎಂದು ಗುಂಡೂರಾವ್ ಟ್ವೀಟಿಸಿದ್ದಾರೆ.

ಇದನ್ನು ಓದಿದ್ದೀರಾ? ಮರ್ಯಾದಾಗೇಡು ಹತ್ಯೆ | ತಂಗಿಯನ್ನೇ ಕೆರೆಗೆ ತಳ್ಳಿ ಹತ್ಯೆಗೈದ ಕೋಮುವಾದಿ ಸಹೋದರ

“ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ. ಶೆಟ್ಟರ್‌ರಂತಹ ಸಾವಿರಾರು ನಾಯಕರನ್ನು ಸೃಷ್ಟಿಸುವ ತಾಕತ್ತು ಕಾಂಗ್ರೆಸ್‌ಗಿದೆ. ಶೆಟ್ಟರ್ ಹಿರಿಯ ರಾಜಕಾರಣಿ. ಆದರೆ ರಾಜಕೀಯ ಸಂಧ್ಯಾಕಾಲದಲ್ಲಿ ತಮ್ಮನ್ನು ಅವಮಾನಿಸಿದ ಪಕ್ಷಕ್ಕೆ ಮರಳಿ ಸೇರಿಕೊಳ್ಳುವ ಮೂಲಕ ಶೆಟ್ಟರ್ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ” ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X