ಕೇಸರಿ ಧ್ವಜಕ್ಕೆ ಅಪಮಾನ ಆರೋಪ; ಮುಸ್ಲಿಂ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ

Date:

Advertisements

ಕೇಸರಿ ಧ್ವಜವನ್ನು ಒಳಉಡುಪಿನಲ್ಲಿ ಇಟ್ಟುಕೊಂಡು ಅಪಮಾನಿಸಿದ್ದಾನೆಂಬ ಆರೋಪದ ಮೇಲೆ ಮುಸ್ಲಿಂ ಯುವಕನನ್ನು ಬೆತ್ತಲೆಗೊಳಿಸಿ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಲ್ಲೆಗೈದಿರುವ ಘಟನೆ ತೆಲಂಗಾಣದ ಮೊರಗಿ ಗ್ರಾಮದಲ್ಲಿ ನಡೆದಿದೆ.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆ ಮೋರಗಿ ಗ್ರಾಮದ ಅಬ್ಬಾಸ್‌ ಅಲಿ ಮೊಹಮ್ಮದ್‌ ರಸೂಲ್‌ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಆತನನ್ನು ವಿವಸ್ತ್ರಗೊಳಿಸಿ ʼಜೈ ಶ್ರೀರಾಮ್‌ʼ ಎಂದು ಘೋಷಣೆ ಕೂಗುತ್ತ ಹಿಂದುತ್ವವಾಗಿಗಳು ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಲ್ಲೆಗೊಳಗಾಲ ಯುವಕ ರಸೂಲ್ ಮತ್ತೆ ಹಲ್ಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisements

ಮೋರಗಿ ಗ್ರಾಮವು ಬೀದರ್‌ ಜಿಲ್ಲೆಯ ಗಡಿ ಭಾಗದಲ್ಲಿದ್ದು, ಘಟನೆಯು ಬೀದರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಕೆಲವು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಘಟನೆ ಬಗ್ಗೆ  ಈದಿನ.ಕಾಮ್ ಜೊತೆ ಮಾತನಾಡಿದ ಜನವಾಡ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಹುಲೆಪ್ಪಾ ಗೌಡಗೊಂಡಾ, “ಇದು ಬೀದರ್‌ ಜಿಲ್ಲೆಯ ಘಟನೆಯಲ್ಲ. ಪಕ್ಕದ ತೆಲಂಗಾಣದ ನಾಗಲಗಿದ್ದ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ” ಎಂದು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X