ತ್ಯಾಜ್ಯ ಉತ್ಪಾದಕರಿಂದ ಆಸ್ತಿ ತೆರಿಗೆಯೊಂದಿಗೆ ಸೇವಾ ಶುಲ್ಕ ಸಂಗ್ರಹಿಸಲು ಬಿಬಿಎಂಪಿ ನಿರ್ಧಾರ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು ಪ್ರಕಟಣೆ ಹೊರಡಿಸಿದ 30 ದಿನಗಳೊಳಗೆ ನೋಟರೈಸ್ಡ್ ಪ್ರಮಾಣ ಪತ್ರ/ಅಫಿಡವಿಟ್ ಅನ್ನು ಭರ್ತಿ ಮಾಡಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಲ್ಲಿಸಬೇಕು. ಪ್ರಮಾಣಪತ್ರವನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಘನತ್ಯಾಜ್ಯ ನಿರ್ವಹಣಾ ನಿಯಮಗಳು-2016ರ ನಿಯಮ-4(3)ರ ಪ್ರಕಾರ, ಘನತ್ಯಾಜ್ಯ ನಿರ್ವಹಣಾ ಬೈ-ಲಾಗಳಲ್ಲಿ ಸೂಚಿಸಿರುವ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ತ್ಯಾಜ್ಯ ಉತ್ಪಾದಕರು ಸುಂಕದ ರೂಪದಲ್ಲಿ ಪಾವತಿಸಬೇಕು. ಅಲ್ಲದೆ, ನಿಯಮ-15(ಎಫ್) ಪ್ರಕಾರ, ನಗರ ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಸಂಗ್ರಹಿಸಬೇಕು. ಅದರಂತೆ, ಈ ಶುಲ್ಕವನ್ನು ಆಸ್ತಿ ತೆರಿಗೆ ಜೊತೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಲೆಮರೆಸಿಕೊಂಡಿದ್ದ ಮೂವರು ರೌಡಿಶೀಟರ್​ಗಳ​ ಬಂಧಿಸಿದ ಸಿಸಿಬಿ ಪೊಲೀಸರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಕಲಂ 285ರಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತವು ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸುವ ಕುರಿತು ನಿರ್ಣಯಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು 30 ದಿನಗಳ ಒಳಗೆ ಪ್ರಮಾಣಪತ್ರವನ್ನು ಬೆಂಗಳೂರಿನ ವಸಂತನಗರದಲ್ಲಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಕಚೇರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X