ದಾವಣಗೆರೆ | ಭದ್ರಾ ನಾಲೆಯ ಕೊನೆಯ ಭಾಗಕ್ಕೆ ದೊರೆಯದ ನೀರು; ರೈತರ ಆಕ್ರೋಶ

Date:

Advertisements

ಭದ್ರಾ ಡ್ಯಾಮ್‌ನಿಂದ ನೆಲೆಗೆ ಹರಿಸುವ ನೀರು, ನಾಲೆಯ ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಬೆಳ್ಳಿಗನೂಡು ವಿತರಣೆ ನಾಲೆ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ಮಾತನಾಡಿ, “2ನೇ ನಾಲಾ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಕಂದಗಲ್, ಶಾಗಲೆ, ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ಕೊಳೇನಹಳ್ಳಿ, ನಾಗರಸನಹಳ್ಳಿ ಭಾಗಕ್ಕೆ ನೀರು ತಲುಪಿಲ್ಲ. ದಾವಣಗೆರೆ ಮತ್ತು ಮಲೆಬೆನ್ನೂರು ವಿಭಾಗಕ್ಕೆ ಹರಿಸಬೇಕಾದ ಪ್ರಮಾಣದಲ್ಲಿ ಮುಖ್ಯ ನಾಲೆಯಲ್ಲಿ 11 ಅಡಿ ಬರುವ ಬದಲು ಕೇವಲ 8 ಅಡಿ ನೀರು ಹರಿಯುತ್ತದೆ. ಇದರಿಂದ ನೀರಾವರಿ ಎಂಜಿನಿಯರ್‌ಗಳಿಗೆ ಕೊನೆ ಭಾಗಕ್ಕೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ” ಎಂದರು.

“12 ದಿನ ನೀರು ಹರಿಸುವುದೆಂಬ ಐಸಿಸಿಯ ತೀರ್ಮಾನ ಅವೈಜ್ಞಾನಿಕವಾಗಿದೆ. ನಾಳೆ ನೀರು ಹರಿಸಿ, 12 ದಿನಗಳಾದವು. ಆದ್ದರಿಂದ ನೀರು ಹರಿಸುವುದನ್ನು ನಿಲ್ಲಿಸಬಾರದು. 20 ದಿನಗಳವರೆಗೆ ಮುಂದುವರೆಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯದ ಭರವಸೆ ; ಉಪವಾಸ ಸತ್ಯಾಗ್ರಹ ಅಂತ್ಯ

ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಕ್ಸಿಕ್ಯುಟೀವ್ ಎಂಜಿನಿಯರ್ ಆರ್ ಬಿ ಮಂಜುನಾಥ ಮಾತನಾಡಿ, “ಮುಖ್ಯ ನಾಲೆಯಲ್ಲಿ ನಿಗದಿತ ಪ್ರಮಾಣದಲ್ಲಿ ನೀರು ಹರಿಸುತ್ತಿಲ್ಲ. ಮುಖ್ಯ ನಾಲೆಯಲ್ಲಿ 11 ಅಡಿ ನೀರು ಹರಿಸಬೇಕು. ಆದರೆ ಕೇವಲ 8 ಅಡಿ ನೀರು ಹರಿಯುತ್ತಿದೆ. 12 ದಿನ ನೀರು ಹರಿಸಬೇಕೆಂಬ ವೇಳಾಪಟ್ಟಿಯಂತೆ ಕೊನೆ ಭಾಗಕ್ಕೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ” ಎಂದು ಅಸಮಾಧಾನಪಟ್ಟರು.

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X