ವಿಜಯಪುರ | ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಆತಂಕ

Date:

Advertisements

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ‌ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಮಿಯ 2ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಮಿ ನಡುಗುವ ಅನುಭವ ಆಗುತ್ತಲೇ ಮನೆಗಳ ಗೋಡೆಗಳಿಗೆ ಹಾಕಿದ್ದ ಪಾತ್ರೆಗಳು ಸೇರಿದಂತೆ ಇತರೆ ವಸ್ತುಗಳು ಚದುರಿ ಸದ್ದು ಮಾಡಿವೆ. ಇದರಿಂದಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಈ ಭಾಗದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಿರುವುದು ಜಿಲ್ಲೆಯ ಜನತೆಗೆ ಭಯಹುಟ್ಟಿಸಿದೆ. ಗುರುವಾರ ಸಂಭವಿಸಿದ ಲಘು ಭೂಕಂಪನವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢೀಕರಿಸಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

Advertisements

ಜಿಲ್ಲೆಯ ಉಕುಮನಾಳ ಗ್ರಾಮದಲ್ಲಿ 2023ರ ಡಿಸೆಂಬರ್ 8ರ ಶುಕ್ರವಾರ ಬೆಳಗ್ಗೆ 6.52ಕ್ಕೆ ಭೂಂಕನಪದ ಅನುಭವವಾಗಿತ್ತು. ಅಂದುಕೂಡ ಜನರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದು ಕೆಲವು ಸಮಸಯದವರೆಗೆ ಇಲ್ಲೇ ಕಾಲಕಳೆಯುವಂತಾಗಿತ್ತು.

ಡಿಸೆಂಬರ್ 8ರ ಬೆಳಗಿನ ಜಾವ ರಿಕ್ಟರ್ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳು ದೃಢಪಡಿಸಿದ್ದರು.

ಕಳೆದ 2ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುತ್ತಲೇ ಇದ್ದು, ಜನರು ಆತಂಕದಲ್ಲಿ ಜೀವನ ಕಳೆಯುಂತಾಗಿದೆ. ರಾತ್ರಿ, ಮಧ್ಯರಾತ್ರಿ ಸಮಯದಲ್ಲಿ ಏಕಾಏಕಿ ಶಬ್ದದೊಂದಿಗೆ ಭೂಮಿ ನಡುಗುತ್ತಿರುವುದು ಜನರು ನಿದ್ದೆಗೆಡುವಂತೆ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X