ಇಂಗ್ಲೆಂಡ್ ವಿರುದ್ಧದ ಟೆಸ್ಟ್ | ಭಾರತ 421/7; 175 ರನ್ ಮುನ್ನಡೆ

Date:

Advertisements

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಎರಡನೇ ದಿನದ ಅಂತ್ಯಕ್ಕೆ 110 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 421 ರನ್‌ ಗಳಿಸಿದ್ದು, 175 ಮುನ್ನಡೆ ಸಾಧಿಸಿದೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ ದಿನ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಪಾರಮ್ಯ ಮೆರೆದರು. ಕೆ ಎಲ್ ರಾಹುಲ್(86) ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ(81) ಅರ್ಧ ಶತಕ ಬಾರಿಸಿದರೆ, ವಿಕೆಟ್ ಕೀಪರ್ ಶ್ರೀಕರ್ ಭರತ್ 41, ಅಕ್ಸರ್ ಪಟೇಲ್ 35 ಹಾಗೂ ಶ್ರೇಯಸ್ ಅಯ್ಯರ್ 35 ರನ್‌ ಗಳಿಸಿ ಭಾರತ ಬೃಹತ್ ಮೊತ್ತದತ್ತ ದಾಪುಗಾಲು ಹಾಕಲು ಕಾರಣರಾದರು.

119/1 ರನ್‌ನೊಂದಿಗೆ ಎರಡನೇ ದಿನದಾಟವನ್ನು ಆರಂಭಿಸಿದ ಟೀಂ ಇಂಡಿಯಾ ಪ್ರಾರಂಭದಲ್ಲಿಯೇ ಜೈಸ್ವಾಲ್ (80) ಹಾಗೂ ಶುಭಮನ್‌ ಗಿಲ್ (23) ಅವರ ವಿಕೆಟ್ ಕಳೆದುಕೊಂಡಿತು. ಕೆ ಎಲ್ ರಾಹುಲ್ ಹಾಗೂ ಶ್ರೇಯಸ್‌ ಅಯ್ಯರ್ 4ನೇ ವಿಕೆಟ್ ನಷ್ಟಕ್ಕೆ 64 ರನ್‌ ಕಲೆ ಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಶ್ರೇಯಸ್ ಔಟಾದ ನಂತರ ರವೀಂದ್ರ ಜಡೇಜಾ ಅವರೊಂದಿಗೆ ಜೊತೆಯಾಟವಾಡಿದ ಕೆ ಎಲ್ ರಾಹುಲ್ 86 ರನ್‌ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ನಂತರ ಬಂದ ವಿಕೆಟ್ ಕೀಪರ್ ಶ್ರೀಕರ್ ಭರತ್ 41 ರನ್‌ ಬಾರಿಸಿ ರೂಟ್‌ಗೆ ಎಲ್‌ಬಿ ಆದರು.

ನಂತರದಲ್ಲಿ ಅನಾವಶ್ಯಕ ರನ್‌ ಓಡಲು ಪ್ರಯತ್ನಿಸಿದ ಆರ್‌ ಅಶ್ವಿನ್ 1 ರನ್‌ಗೆ ಔಟಾದರು. ಜಡೇಜಾ ಹಾಗೂ ಅಕ್ಸರ್ ಪಟೇಲ್ 8ನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಬಾರಿಸಿದ್ದಾರೆ.

ಇಂಗ್ಲೆಂಡ್ ಪರ ಜೋರೂಟ್ 77/2, ಟಾಮ್‌ ಹಾರ್ಟ್ಲ್ 131/2, ಲೀಚ್‌ ಹಾಗೂ ರಿಯಾನ್ ಅಹಮದ್‌ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X