ಡಿಕೆಶಿ ವಿರುದ್ಧ ವಾದ ಮಂಡನೆ ವಿಚಾರಕ್ಕೆ ನ್ಯಾಯಮೂರ್ತಿ-ಸಿಬಿಐ ವಕೀಲರ ನಡುವೆ ವಾಗ್ವಾದ

Date:

Advertisements
  • ನ್ಯಾಯಮೂರ್ತಿ ಕೆ ನಟರಾಜನ್‌ ಪೀಠದಿಂದ ಅರ್ಜಿ ವಿಚಾರಣೆ
  • ಏ.17ಕ್ಕೆ ಮುಂದೂಡಿ ಆದೇಶ ಹೊರಡಿಸಿದ ನ್ಯಾಯಾಧೀಶರು

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರುದ್ಧ ದಾಖಲಾಗಿರುವ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆ ಆಗಿರುವ ಅರ್ಜಿ ವಿಚಾರಣೆಯ ವಾದ ಮಂಡನೆ ವಿಚಾರದ ವೇಳೆ ನ್ಯಾಯಮೂರ್ತಿಗಳು ಮತ್ತು ಸಿಬಿಐ ವಕೀಲರ ನಡುವೆ ಬಿರುಸಿನ ವಾಗ್ವಾದ ನಡೆದಿದೆ.

ರಾಜ್ಯ ಅಭಿಯೋಜಕರ ಮನವಿ ಮೇರೆಗೆ ಡಿಕೆಶಿ ಪ್ರಕರಣವನ್ನು ನಿಗದಿತ ಸಮಯಕ್ಕೆ ಬದಲಾಗಿ ಮುಂಚಿತವಾಗಿ ಆಲಿಸಲು ನ್ಯಾಯಮೂರ್ತಿ ಕೆ ನಟರಾಜನ್‌ ಅವರು ಕೈಗೆತ್ತಿಕೊಂಡರು.

ಈ ವೇಳೆ ಸಿಬಿಐ ಪರ ವಾದ ಮಂಡಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್‌ ಅವರು ಬೇರೊಂದು ಪೀಠದಲ್ಲಿ ವಾದ ಮಂಡನೆ ಮಾಡುತ್ತಿದ್ದರು. ಈ ವಿಷಯವನ್ನು ಸಹೋದ್ಯೋಗಿಗಳು ನ್ಯಾಯಾಧೀಶರ ಗಮನಕ್ಕೆ ತಂದ ಮತ್ತೊಮ್ಮೆ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

Advertisements

ಅವರ ಮಾತಿಗೆ ಒಪ್ಪಿದ ನ್ಯಾಯಾಧೀಶರು ಕೆಲ ಕಾಲ ಕಾಲಾವಕಾಶ ನೀಡಿದರು. ಕೆಲ ಹೊತ್ತಿನ ನಂತರ, ಮತ್ತೆ ವಿಚಾರಣೆ ಆರಂಭಿಸಿದಾಗಲೂ ಪ್ರಸನ್ನಕುಮಾರ್‌ ಅವರು ಬೇರೊಂದು ಪ್ರಕರಣದ ವಿಚಾರಣೆಯಲ್ಲಿ ಇದ್ದರು.

ನ್ಯಾಯಾಲಯವು ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತು ಡಿ ಕೆ ಶಿವಕುಮಾರ್‌ ಪರ ಹಾಜರಾಗಿದ್ದ ಹಿರಿಯ ವಕೀಲರ ವಾದ ಆಲಿಸಿ, ಪ್ರಕರಣದ ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಆದೇಶ ನೀಡಿತು.

ಈ ಸುದ್ದಿ ತಿಳಿಯುತ್ತಿದ್ದಂತೆ ನ್ಯಾ. ನಟರಾಜನ್‌ ಪೀಠದ ಮುಂದೆ ಹಾಜರಾದ ಪ್ರಸನ್ನಕುಮಾರ್‌ ಸಿಬಿಐ ಪರ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? : ಮುರುಘಾಶ್ರೀ ಪ್ರಕರಣ | ಆರೋಪಿ ಶಿವಮೂರ್ತಿ ಶರಣರ ಮೇಲೆ ದೋಷಾರೋಪ ನಿಗದಿ

ಇದಕ್ಕೆ ಕೋಪಗೊಂಡ ನ್ಯಾ. ನಟರಾಜನ್‌ ನಿಮಗಾಗಿ 2 ಸಲ ವಿಚಾರಣೆ ಮುಂದೂಡಲಾಗಿದೆ. ಈಗ ಮತ್ತೆ ವಾದ ಮಂಡನೆಗೆ ಕಾಲಾವಕಾಶ ಕೇಳುತ್ತಿದ್ದೀರಲ್ಲಾ? ನಿಮಗೆ ಬೇಕೆಂದಾಗ ಬಂದು ವಾದ ಮಾಡುತ್ತೇನೆ ಎನ್ನಲು ಇದನ್ನು ಏನೆಂದುಕೊಂಡಿದ್ದೀರಿ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪ್ರಸನ್ನಕುಮಾರ್‌ ‘ಬೇರೊಂದು ಪೀಠದಲ್ಲಿ ವಾದ ಮಂಡನೆ ಇತ್ತು. ಹಾಗಾಗಿ ನಿಮ್ಮ ಮುಂದೆ ಹಾಜರಾಗಲು ಸಾಧ್ಯವಾಗಿಲ್ಲ. ಹಾಗಾಗಿ ನನ್ನ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು ನೀವು ಹೇಳಬೇಕೆಂದುಕೊಂಡಿರುವುದನ್ನು ಲಿಖಿತವಾಗಿ ಸಲ್ಲಿಸಿ ಎಂದರು.

ಇದಕ್ಕೆ ಮರು ಉತ್ತರಿಸಿದ ಪ್ರಸನ್ನಕುಮಾರ್‌ ವಾದ ಆಲಿಸಲು ತಾವು ಸಿದ್ಧವಿಲ್ಲ ಎಂಬ ವಿಚಾರವನ್ನು ನೀವು ಕೂಡ ಆದೇಶದಲ್ಲಿ ದಾಖಲಿಸಬೇಕು ಎಂದು ಪಟ್ಟುಹಿಡಿದರು.

ಇವರಿಬ್ಬರ ಹಗಜಗ್ಗಾಟ ಕೆಲಕಾಲ ಹಾಗೆ ಮುಂದುವರೆಯಿತು. ಕೊನೆಗೆ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ವಿಸ್ತರಿಸಿದ್ದಲ್ಲದೇ, ಸಿಬಿಐ ಪರ ವಕೀಲರ ವಾದ ಆಲಿಸಲು ಏಪ್ರಿಲ್‌ 17ಕ್ಕೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X