ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮರಾಠ ಮೀಸಲಾತಿಗೆ ಒಪ್ಪಿದ ಶಿಂಧೆ ಸರ್ಕಾರ: ನಾಲ್ಕು ದಶಕಗಳ ಹೋರಾಟ ಅಂತ್ಯ

Date:

Advertisements

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ, ಮೀಸಲಾತಿಗೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ನಾಲ್ಕು ದಶಕಗಳ ಹೋರಾಟ ಅಂತ್ಯಗೊಂಡಿದೆ.

ನಮ್ಮ ಮನವಿಯನ್ನು ಸ್ವೀಕರಿಸಿ ಮಹಾರಾಷ್ಟ್ರ ಸರ್ಕಾರವು ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದೆ. ಹಾಗಾಗಿ, ನನ್ನ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಜ್ ಪಾಟೀಲ್ ಲಕ್ಷಾಂತರ ಜನರ ಮುಂದೆ ಘೋಷಿಸಿದರು. ಈ ವೇಳೆ ನೆರೆದಿದ್ದ ಮಂದಿ ಕೇಕೆ, ಶಿಳ್ಳೆ ಹೊಡೆದು ಸಂಭ್ರಮಿಸಿದರು.

ಸಿ.ಎಂ ಏಕನಾಥ್ ಶಿಂಧೆ ಅವರು ಮನೋಜ್ ಅವರಿಗೆ ಜ್ಯೂಸ್ ನೀಡಿದರು. ಅದನ್ನು ಸ್ವೀಕರಿಸಿದ ಅವರು, ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ ಎಂದು ಘೋಷಣೆ ಮಾಡಿದರು.

Advertisements

ಮುಖ್ಯಮಂತ್ರಿಯವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅಲ್ಲದೆ ನಮ್ಮ ಬೇಡಿಕೆಗಳಿಗೆ ಒಪ್ಪಿಗೆಯನ್ನು ಸೂಚಿಸುವ ಮೂಲಕ ನನ್ನ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತಿದ್ದೇನೆ. ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದೇನೆ ಎಂದು ಹೇಳಿದರು.

ತಮ್ಮ ಬೇಡಿಕೆಗೆ ಆಗ್ರಹಿಸಿ ಜನವರಿ 20ರಂದು ಜಲ್ನಾದಿಂದ ಪ್ರಾರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರವನ್ನು ಪ್ರವೇಶಿಸಲು ಸಜ್ಜಾಗುತ್ತಿದ್ದಂತೆ ಅವರ ಘೋಷಣೆ ಹೊರಬಿದ್ದಿದೆ.

ಸಾಮಾಜಿಕ ಕಾರ್ಯಕರ್ತ ಮನೋಜ್ ಜಾರಾಂಗೆ ನೇತೃತ್ವದಲ್ಲಿ ಶುಕ್ರವಾರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭವಾಗಿತ್ತು. ದಕ್ಷಿಣ ಮುಂಬೈನ ಆಝಾದ್ ಮೈದಾನದಲ್ಲಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಇದರೊಂದಿಗೆ ನಾಲ್ಕು ದಶಕಗಳಿಂದ ನಡೆಯುತ್ತಿದ್ದ ಹೋರಾಟ ಅಂತ್ಯಗೊಂಡಿದೆ.

ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರ ಪ್ರವೇಶಿಸಲು ಸಜ್ಜಾಗಿತ್ತು. ಅಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು, ಪ್ರತಿಭಟನೆ ಸುಖಾಂತ್ಯ ಕಂಡಿದೆ. ನಂತರ ಮಹಾರಾಷ್ಟ್ರ ಸರ್ಕಾರವು ಜಾತಿ ಮೀಸಲಾತಿ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದು, ಸಚಿವರಾದ ದೀಪಕ್ ಕೇಸರ್ಕರ್ ಮತ್ತು ಮಂಗಲ್ ಪ್ರಭಾತ್ ಲೋಧಾ ಅವರು ಮನೋಜ್ ಜಾರಂಗೆ ಪಾಟೀಲ್ ಅವರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಪತ್ರ ನೀಡಿದ್ದಾರೆ.

ನಾಲ್ಕು ದಶಕಗಳಿಂದ ನಡೆಯುತ್ತಿದ್ದ ಹೋರಾಟ
ಮಹಾರಾಷ್ಟ್ರ ಜನಸಂಖ್ಯೆಯಲ್ಲಿ 33% ಒಳಗೊಂಡಿರುವ ಮರಾಠ ಸಮುದಾಯವು ದಶಕಗಳಿಂದ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿದ್ದವು. 1981 ರಲ್ಲಿ ಮರಾಠಾ ಮೀಸಲಾತಿಗೆ ಒತ್ತಾಯಿಸಿ ಮೊದಲ ಪ್ರತಿಭಟನೆಯು ಮತ್ತಾಡಿ ಕಾರ್ಮಿಕ ಸಂಘದ ನಾಯಕ ಅಣ್ಣಾಸಾಹೇಬ ಪಾಟೀಲ ನೇತೃತ್ವದಲ್ಲಿ ನಡೆದಿತ್ತು.

2019ರಲ್ಲಿ ರಾಜ್ಯ ಸರ್ಕಾರ ಮರಾಠ ಸಮುದಾಯಕ್ಕೆ 16% ಮೀಸಲಾತಿ ನೀಡಿತು. ಆದರೆ, 2021ರಲ್ಲಿ ಸುಪ್ರೀಂ ಕೋರ್ಟ್‌ ಶೇ.50 ಮೀಸಲಾತಿಯನ್ನು ಉಲ್ಲೇಖಿಸಿ ಶೇ.16ರ ಕೋಟಾವನ್ನು ರದ್ದುಗೊಳಿಸಿತ್ತು. ಅಂದಿನಿಂದ ಮನೋಜ್ ಜಾರಂಗೆ ನೇತೃತ್ವದಲ್ಲಿ ಮತ್ತೆ ಪ್ರತಿಭಟನೆ ಭುಗಿಲೆದ್ದಿತ್ತು. ಕೆಲವು ಕಡೆಗಳಲ್ಲಿ ಪ್ರತಿಭಟನೆಯು ಹಿಂಸಾರೂಪಕ್ಕೂ ತಾಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X