ಬೆಂಗಳೂರು | ಸ್ನೇಹಿತರ ಜಗಳದ ಮಧ್ಯ ಹೋದ ವ್ಯಕ್ತಿ ಕೊಲೆ

Date:

Advertisements

ಸ್ನೇಹಿತರ ಜಗಳದ ಮಧ್ಯೆ ಹೋದ ವ್ಯಕ್ತಿಯೊಬ್ಬನ ಕೊಲೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಹಾಗೂ ದರ್ಶನ್ ಕೊಲೆ ಮಾಡಿದ ಆರೋಪಿಗಳು. ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

Advertisements

ದರ್ಶನ್‌ಗೆ ಆತನ ದೊಡ್ಡಮ್ಮ ₹3000 ಹಣ ನೀಡಿ, ಆತನ ತಾಯಿಗೆ ನೀಡಲು ಹೇಳಿರುತ್ತಾರೆ. ಆದರೆ, ದರ್ಶನ್ ಅದೇ ದುಡ್ಡು ತೆಗೆದುಕೊಂಡು ಜನವರಿ 24ರಂದು ಬಾರ್‌ಗೆ ತನ್ನ ಸ್ನೇಹಿತರಾದ ನಿತಿನ್ ಮತ್ತು ರಮೇಶ್ ಜತೆಗೆ ತೆರಳಿದ್ದಾನೆ.

ಇದೇ ಸಮಯದಲ್ಲಿ ಬಾರ್‌ಗೆ ಆತನ ಇನ್ನು ಕೆಲವು ಸ್ನೇಹಿತರಾದ ಸದ್ಯ ಆರೋಪಿಗಳಾದ ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಬಂದಿದ್ದಾರೆ. ಈ ನಡುವೆ ದರ್ಶನ್ ಸ್ನೇಹಿತ ನಿತಿನ್ ಹಾಗೂ ಪ್ರೀತಂ ನಡುವೆ ಜಗಳ ಆರಂಭವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್‌ ಹತ್ಯೆ ಪ್ರಕರಣ; ನಾಲ್ವರ ಬಂಧನ

ಈ ಘಟನೆ ಬಳಿಕ ದರ್ಶನ ಮತ್ತು ಆತನ ಸಂಗಡಿಗರು ರಮೇಶ್ ಮನೆಗೆ ತೆರಳುತ್ತಾರೆ. ಇದೇ, ಸಮಯಕ್ಕೆ ಆರೋಪಿಗಳು ಆತನ ಮನೆ ಬಳಿ ಬರುತ್ತಾರೆ. ಆಗ ನಿತಿನ್ ಮತ್ತು ಪ್ರೀತಂ ನಡುವೆ ಗಲಾಟೆ ಆಗಿ, ಪ್ರೀತಂ ನಿತಿನ್​ಗೆ ಹೊಡೆದಿದ್ದಾನೆ. ಈ ವೇಳೆ, ಮಧ್ಯಪ್ರವೇಶಿಸಿದ ದರ್ಶನ್‌ಗೆ ಪ್ರೀತಂ ಸಿಮೆಂಟ್​ ಇಟ್ಟಿಗೆಯಿಂದ ಹೊಡೆದಿದ್ದಾನೆ. ಈ ವೇಳೆ, ದರ್ಶನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X