ಚಿತ್ರದುರ್ಗ | ಮೂಲಸೌಕರ್ಯ ಪೂರೈಕೆಗೆ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಆಗ್ರಹ

Date:

Advertisements

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಭೂಮಿ, ವಸತಿ ಹಾಗೂ ಮೂಲ ಸೌಲಭ್ಯ ನೀಡಬೇಕೆಂದು ಅಲೆಮಾರಿ, ಅರೆಅಲೆಮಾರಿ ಒಕ್ಕೂಟದ (ಎಸ್‌ಸಿ/ಎಸ್‌ಟಿ) ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, “ಜಿಲ್ಲೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಲ್ಲಿ ಸುಮಾರು 50,000ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ನಾಗರಿಕ ಮೂಲಭೂತ ಸೌಲಭ್ಯಗಳಿಂದ ವಂಚಿತ ಸಮುದಾಯವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುವ ಅಲೆಮಾರಿಗಳಿಗೆ ಭೂಮಿ, ವಸತಿ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ರಾಜಕೀಯ ವ್ಯವಸ್ಥೆ ಸೇರಿದಂತೆ ಯಾವುದೇ ಸ್ಥನಮಾನಗಳು ಇಲ್ಲದಂತಾಗಿದೆ. ಅಲೆಮಾರಿಗಳು ಊರಿಂದ ಊರಿಗೆ ಅಲೆದು ಭಿಕ್ಷೆ ಬೇಡಿ ಕಲೆಗಳನ್ನು ಪ್ರದರ್ಶನ ಮಾಡಿ ಜೀವನವನ್ನು ನಡೆಸಿಕೊಂಡು ಬಂದ ಈ ನೆಲದ ಸಮುದಾಯವಾಗಿದ್ದು, ಇಂದು ಸರ್ಕಾರಿ ಸೌಲಭ್ಯಗಳು ಸೇರಿದಂತೆ ನಾಗರಿಕ ಮೂಲ ಸೌಲಭ್ಯಗಳಿಂದ ವಂಚಿತವಾಗಿರುವ ಬಹುದೊಡ್ಡ ಸಮುದಾಯವಾಗಿದೆ” ಎಂದು ಮಾಹಿತಿ ನೀಡಿದರು.

“ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 50,000 ಹೆಚ್ಚು ಜನಸಂಖ್ಯೆ ಹೊಂದಿರುವ ಅಲೆಮಾರಿಗಳಾದ ಸುಡಗಾಡು ಸಿದ್ದ, ಬುಡ್ಗಜಂಗಮ, ಸಿಳ್ಳೆಕ್ಯಾತ, ಚನ್ನದಾಸ, ಹಂದಿಜೋಗಿ, ಕೊರಚ, ಕೊರಮ ಸಮುದಾಯಗಳು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಇಂತಹ ಸಮುದಾಯಗಳು ಸರ್ಕಾರದ ಯಾವುದೇ ಸೌಲಭ್ಯಗಳಿಲ್ಲದೆ, ಬಟ್ಟೆಯಿಂದ ನಿರ್ಮಾಣ ಮಾಡಿಕೊಂಡಿರುವ ಟೆಂಟ್‌ಗಳಲ್ಲಿ ವಾಸವಿದ್ದು, ಸರ್ಕಾರ ಅಲೆಮಾರಿ ಸಮುದಾಯಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಬೇಡಿಕೆಗಳನ್ನು ಜಾರಿ ಮಾಡಬೇಕಾದ ಆದ್ಯ ಕರ್ತವ್ಯವಾಗಿದೆ” ಎಂದು ಒತ್ತಾಯಿಸಿದರು.

Advertisements

“ಅಲೆಮಾರಿ ಜನಾಂಗಕ್ಕಾಗಿ ಸ್ಥಾಪನೆಯಾಗಿರುವ ನಿಗಮಕ್ಕೆ ಪ್ರತಿವರ್ಷ ₹500 ಕೋಟಿ ರೂಪಾಯಿ ನೀಡಬೇಕು. ಅಲೆಮಾರಿ ಜನಾಂಗಕ್ಕೆ ಭೂಮಿ, ವಸತಿ, ವ್ಯವಸ್ಥೆಯನ್ನು ಖಾಯಂಗೊಳಿಸಬೇಕು. ಅಲೆಮಾರಿಗಳು ವ್ಯಾಪಾರ ನಡೆಸಲು ಸರ್ಕಾರದಿಂದ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಸರ್ಕಾರದ ನಿಗಮಗಳಿಗೆ ಅಲೆಮಾರಿ ಜನಾಂಗದವರಿಗೆ ಆದ್ಯತೆ ನೀಡಬೇಕು. ಇತರೆ ಸರ್ಕಾರಿ ಸೌಲಭ್ಯಗಳು ಸೇರಿದಂತೆ ಈ ಸಮುದಾಯಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ಕಮಹಾದೇವಿ ವಿವಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ

ವಿಮುಕ್ತಿ ವಿದ್ಯಾಸಂಸ್ಥೆ ನಿರ್ದೇಶಕ ಆರ್ ವಿಶ್ವಸಾಗರ್, ಸುಡಗಾಡು ಸಿದ್ದರು ಜನಾಂಗದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಅಲೆಮಾರಿ ಸಂಘಟನೆ ಜಿಲ್ಲಾಧ್ಯಕ್ಷ ನಾಗರಾಜು, ಸಿಳ್ಳೆಕ್ಯಾತ ಮುಖಂಡರು, ಅಧ್ಯಕ್ಷರು ಮಾರಿಕಾಂಬ ಕೃಷ್ಣಪ್ಪ, ಚನ್ನದಾಸ ಜನಾಂಗ ಜಿಲ್ಲಾಧ್ಯಕ್ಷ ರಂಗಪ್ಪ ಸೇರಿದಂತೆ ಬಹುತೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X