ಮೊದಲ ಟೆಸ್ಟ್ : ಭಾರತದ ವಿರುದ್ಧ ಇಂಗ್ಲೆಂಡ್‌ಗೆ 28 ರನ್‌ಗಳ ರೋಚಕ ಜಯ: ಮಿಂಚಿದ ಪೋಪ್, ಹಾರ್ಟ್ಲಿ

Date:

Advertisements

ಭಾರತ ವಿರುದ್ಧ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡ 28 ರನ್‌ಗಳ ಅಂತರದ ಗೆಲುವು ಸಾಧಿಸಿದೆ.

ಹೈದರಾಬಾದ್‌ನಲ್ಲಿ ನಡೆದ ಪಂದ್ಯದ 4ನೇ ದಿನದಲ್ಲಿ ಆಂಗ್ಲ ಪಡೆ ಎರಡನೇ ಇನಿಂಗ್ಸ್‌ನಲ್ಲಿ 420 ರನ್‌ಗಳೊಂದಿಗೆ ನೀಡಿದ 231 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ ತನ್ನ 2ನೇ ಇನಿಂಗ್ಸ್‌ನಲ್ಲಿ 202 ರನ್‌ಗಳಿಗೆ ತನ್ನ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲನ್ನೊಪ್ಪಿಕೊಂಡಿತು.

ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ 39, ಶ್ರೀಕರ್ ಭರತ್ 28, ಆರ್‌ ಅಶ್ವಿನ್ 28 ಹಾಗೂ ಕೆ ಎಲ್ ರಾಹುಲ್ 22 ರನ್ ಗಳಿಸಿದ್ದನ್ನು ಬಿಟ್ಟರೆ ಉಳಿದವರು 20ರ ಗಡಿ ದಾಟಲಿಲ್ಲ.

Advertisements

ಟೀಂ ಇಂಡಿಯಾ ಬ್ಯಾಟರ್‌ಗಳನ್ನು ಪೆವಿಲಿಯನ್‌ ಪಡೆ ದಾರಿ ತೋರಿಸಿದ ಸ್ಪಿನ್ನರ್ ಟಾಮ್ ಹಾರ್ಟ್ಲಿ 7 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು. 26.2 ಓವರ್‌ಗಳನ್ನು ಮಾಡಿದ ಟಾಮ್ ಹಾರ್ಟ್ಲಿ 62 ರನ್‌ಗಳಿಗೆ 7 ವಿಕೆಟ್ ಕಬಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಎರಡನೇ ಇನಿಂಗ್ಸ್‌ನಲ್ಲಿ 316/6 ವಿಕೆಟ್‌ನೊಂದಿಗೆ ನಾಲ್ಕನೇ ದಿನವನ್ನು ಆರಂಭಿಸಿದ ಆಂಗ್ಲರ ಪಡೆ ಓಲಿ ಪೋಪ್ ಅವರ 196 ರನ್‌ಗಳ ನೆರವಿನಿಂದ 102 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 420 ರನ್‌ ಗಳಿಸಿ ಭಾರತಕ್ಕೆ 231 ರನ್ ಗುರಿ ನೀಡಿತು. 278 ಚೆಂಡುಗಳಲ್ಲಿ 21 ಬೌಂಡರಿಯೊಂದಿಗೆ 196 ರನ್‌ ಗಳಿಸಿದ ಪೋಪ್ ಕೇವಲ 4 ರನ್‌ಗಳಿಂದ ದ್ವಿಶತಕ ವಂಚಿತರಾದರು.

2ನೇ ಇನಿಂಗ್ಸ್‌ನಲ್ಲಿ ಭಾರತದ ಪರ ಬುಮ್ರಾ 41/4, ಆರ್‌ ಅಶ್ವಿನ್ 126/3, ರವೀಂದ್ರ ಜಡೇಜಾ 131/2 ವಿಕೆಟ್ ಕಿತ್ತು ಇಂಗ್ಲೆಂಡ್ ಪತನಕ್ಕೆ ಕಾರಣರಾದರು.

ಇದಕ್ಕೂ ಮೊದಲು ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ ಗಳಿಸಿದರೆ, ಇದಕ್ಕುತ್ತರವಾಗಿ ಟಿಂ ಇಂಡಿಯಾ 436 ರನ್‌ ಕಲೆ ಹಾಕಿತ್ತು.

ಈ ಗೆಲುವಿನಿಂದ ಇಂಗ್ಲೆಂಡ್ ಐದು ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್‌ ಮಾ.2ರಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X