7 ದಿನಗಳೊಳಗೆ ಭಾರತದಾದ್ಯಂತ ಸಿಎಎ ಜಾರಿ: ಕೇಂದ್ರ ಸಚಿವ

Date:

Advertisements

ದೇಶಾದ್ಯಂತ ಏಳು ದಿನಗಳೊಳಗಾಗಿ ಏಕರೂಪ ನಾಗರೂಪ ಸಂಹಿತೆ(ಸಿಎಎ) ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕ್‌ದ್ವೀಪ್‌ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಶಾಂತನು ಠಾಕೂರ್, ನಾನು ನಿಮಗೆ ಏಳು ದಿನಗಳೊಳಗೆ ಗ್ಯಾರಂಟಿ ನೀಡುತ್ತೇನೆ, ಇದು ಕೇವಲ ಬಂಗಾಳ ಮಾತ್ರವಲ್ಲ ಸಿಎಎ ದೇಶಾದ್ಯಂತ ಅನುಷ್ಠಾನಗೊಳಿಸಲಾಗುತ್ತದೆ” ಎಂದು ಹೇಳಿದರು.

ಬಂಗಾಳದ ಬಿಜೆಪಿ ಲೋಕಸಭಾ ಸದಸ್ಯರು ಆಗಿರುವ ಶಾಂತನು ಠಾಕೂರ್ ಸಿಎಎ ಹೇಳಿಕೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದ ಮಾತನ್ನೇ ಪುನರ್ರಚ್ಚರಿಸಿದರು.

Advertisements

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪಶ್ಚಿಮ ಬಂಗಾಳದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದ ಅಮಿತ್ ಶಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಅನುಷ್ಠಾನಗೊಳಿಸಲಿದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಅಮಿತ್‌ ಶಾ ಹೇಳಿಕೆಯ ನೇರವಾದ ಗುರಿಯು ಸಿಎಎಯನ್ನು ಕಠಿಣವಾಗಿ ವಿರೋಧಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಒಳಗೊಂಡಿತ್ತು.

ಡಿಸೆಂಬರ್‌ನಲ್ಲಿ ಕೋಲ್ಕತ್ತಾದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಅಮಿತ್‌ ಶಾ, ರಾಜ್ಯದಲ್ಲಿ ತಾಂಡವವಾಡುತ್ತಿರುವ ಹಣದುಬ್ಬರ, ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರಗಳಿಗೆ ಮಮತಾ ಬ್ಯಾನರ್ಜಿ ಕಾರಣರಾಗಿದ್ದು 2023ರ ವಿಧಾನಸಭಾ ಚುನಾವಣೆಗಳಲ್ಲಿ ಮಮತಾ ಅವರನ್ನು ಕೆಳಗಿಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ್ದರು.

2019ರಲ್ಲಿ ಸಿಎಎಗೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳ ಅಂಕಿತಕ್ಕೆ ಸ್ವೀಕಾರಕ್ಕೆ ಹೋದ ನಂತರ ದೇಶಾದ್ಯಂತ ವಿಪಕ್ಷಗಳು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು.

ಸುದ್ದಿಸಂಸ್ಥೆಗಳ ಮೂಲಗಳ ಪ್ರಕಾರ ಸಿಎಎ ನಿಯಮಗಳು ಕೇಂದ್ರದ ಬಳಿ ಸಿದ್ದವಿದ್ದು ಯೋಜನೆಯನ್ನು ಲೋಕಸಭಾ ಚುನಾವಣೆಗೂ ಮೊದಲು ಅನುಷ್ಠಾನಗೊಳಿಸಲಾಗುತ್ತದೆ. ಯೋಜನೆಯ ನಿಯಮದನ್ವಯ ಭಾರತಕ್ಕೆ ಬರುವ ಅರ್ಜಿದಾರರು ಪ್ರವಾಸಿ ದಾಖಲೆಗಳಿಲ್ಲದೆ ವರ್ಷವನ್ನು ಘೋಷಿಸಿ ಆಗಮಿಸಬಹುದು. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X