ರಾಹುಲ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕ ಸುವೆಂದು ಅಧಿಕಾರಿ ವಿರುದ್ಧ ಪೊಲೀಸ್ ದೂರು

Date:

Advertisements

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಸುವೆಂದು ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಬೇಷರತ್ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಬಂಗಾಳ ಕಾಂಗ್ರೆಸ್ ಕಾರ್ಯದರ್ಶಿ ಸುಮನ್ ರಾಯ್ ಚೌಧರಿ ಹಾಗೂ ಪಕ್ಷದ ವಕ್ತಾರರಾದ ಅಭಿಷೇಕ್ ಬ್ಯಾನರ್ಜಿ ರಾಯ್‌ಗಂಜ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ನಾನು ಕಳೆದ ನಾಲ್ಕು ದಿನಗಳಿಂದ ಸತತವಾಗಿ ರಾಹುಲ್ ಗಾಂಧಿ ಬಗ್ಗೆ ಕೇಳುತ್ತಿದ್ದೇನೆ. ಯಾರಿವನು? ಈತ ಕೆಲವು ದಿನಗಳ ಹಿಂದೆ ಬೆಳಿಗ್ಗೆ ಟೀ ಮಾಡಲು ಕಲ್ಲಿದ್ದಲುಗಳನ್ನು ಒಲೆಯ ಮೇಲೆ ಇಡುವುದಾಗಿ ಹೇಳಿದ್ದ. ಟೀ ಮಾಡಲು ಕಲ್ಲಿದ್ದಲುಗಳನ್ನು ಒಲೆಯ ಮೇಲೆ ಇಡುವುದು ನನ್ನ ಜ್ಞಾನ ಅಥವಾ ತಿಳುವಳಿಕೆಯನ್ನು ಮೀರಿದ್ದು” ಎಂದು ಸುವಿಂದು ಅಧಿಕಾರಿ ಹಾಸ್ಯ ಮಾಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಸುವಿಂದು ಅಧಿಕಾರಿ ಹೇಳಿಕೆಯ ವಿರುದ್ಧ ಟಿಎಂಸಿ ವಕ್ತಾರರಾದ ಕುನಾಲ್ ಘೋಷ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಎಂತಹ ಭಾಷೆ? ಖಂಡಿತಾ ಅನಾಗರಿಕ ಹಾಗೂ ಕೆಟ್ಟ ಸಂಸ್ಕೃತಿಯಾಗಿದೆ. ರಾಹುಲ್ ಗಾಂಧಿ ಅವಮಾನಿಸಲು ಎಂತಹ ಭಾಷೆ ಬಳಸಿದ್ದಾರೆ ಎಂದು ಕುನಾಲ್ ಟ್ವೀಟ್ ಮಾಡಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಂಗಾಳದ ವಿಪಕ್ಷದ ನಾಯಕ ಇಂತಹ ಅವಹೇಳನಕಾರಿ ಭಾಷೆ ಬಳಸಿರುವುದು ತುಂಬಾ ದುರದೃಷ್ಟಕರ ಎಂದು ಬಂಗಾಳ ಕಾಂಗ್ರೆಸ್ ಕಾರ್ಯದರ್ಶಿ ಸುಮನ್ ರಾಯ್ ಚೌಧರಿ ಹೇಳಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದಕ್ಕೆ 24 ಗಂಟೆಯೊಳಗಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಚೌಧರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X