ಬಹಿರಂಗವಾಗಿ ವಿಜಯೇಂದ್ರನ ಕಾಲಿಗೆ ಬಿದ್ದು ಖೂಬಾಗೆ ಟಿಕೆಟ್ ಕೊಡಬೇಡಿ ಎಂದ ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್!

Date:

Advertisements

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಲಿಗೆ ಬಿದ್ದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಭಗವಂತ ಖೂಬಾಗೆ ನೀಡಬಾರದು, ಒಳ್ಳೆಯ ವ್ಯಕ್ತಿಗೆ ನೀಡಬೇಕು ಎಂದು ಬಹಿರಂಗವಾಗಿಯೇ ಮನವಿ ಮಾಡಿದರು.

ಬೀದರ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ಸಾವಿರಾರು ಜನರ ಮುಂದೆ ನಡೆದ ಈ ಘಟನೆ ವೇದಿಕೆಯಲ್ಲೇ ಇದ್ದ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡಿತು.

“ಹಾಲಿ ಸಂಸದ ಭಗವಂತ ಖೂಬಾ ಅವರು ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಿಸಿ, ಜೈಲಿಗೆ ಕಳುಹಿಸಿದ್ದಾರೆ. ಪಕ್ಷದಲ್ಲೇ ಇದ್ದುಕೊಂಡು ಪಕ್ಷಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ, ಅವರಿಗೆ ಟಿಕೆಟ್ ನೀಡಬಾರದು” ಎಂದು ಚವ್ಹಾಣ್ ಬಹಿರಂಗವಾಗಿ ಕೂಗಿ ಹೇಳಿದರು.

Advertisements

ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ ಬೀದರ್‌ ಜಿಲ್ಲೆಗೆ ಆಗಮಿಸಿದ್ದರು. ಟಿಕೆಟ್‌ ಆಕಾಂಕ್ಷಿಗಳಿಂದ ವಿಜಯೇಂದ್ರಗೆ ಭರ್ಜರಿ ಸ್ವಾಗತ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಸಂಸದರಾದ ಭಗವಂತ ಖೂಬಾ ಸೇರಿ ಗುರುನಾಥ ಕೊಳ್ಳೂರು, ಚನ್ನಬಸವಣ್ಣ ಬಳತೆ, ಮಾಜಿ ಶಾಸಕರಾದ ಸುಭಾಷ್‌ ಕಲ್ಲೂರ, ನಾಗರಾಜ ಕರ್ಪೂರ, ಡೋಣಗಾಂವ್‌ನ ಡಾ. ಶಂಭುಲಿಂಗ ಶಿವಾಚಾರ್ಯರು, ನಂದಕುಮಾರ ಸಾಳುಂಕೆ, ಪದ್ಮಾಕರ್‌ ಪಾಟೀಲ್‌, ಅನಂತ ಬಿರಾದಾರ್‌ ಸೇರಿ ಅನೇಕರು ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದು, ಲಾಬಿ ಶುರು ಮಾಡಿಕೊಂಡಿದ್ದಾರೆ. ಇವರ ಜತೆಗೆ ಹಾಲಿ ಶಾಸಕರಿಬ್ಬರೂ ಸಹ ಟಿಕೆಟ್‌ ನೀಡಿದರೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಒಬ್ಬ ಜನಪ್ರತಿನಿಧಿ ವೇದಿಕೆ ಮೇಲೆ ಪಕ್ಷದ ಅಧ್ಯಕ್ಷನ ಕಾಲಿಗೆ ಬಿದ್ದು ನೋಡುವ ಜನರಿಗೆ ಮುಜುಗರ ಉಂಟು ಮಾಡುವ ಇವರು ಉಳಿದವರಿಗೆ ಸಂಸ್ಕೃತಿ ಸಂಪ್ರದಾಯದ ಪಾಠ ಮಾಡುವರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X