ರಾಯಚೂರು | ವಕ್ಫ್ ಮಂಡಳಿ ಜಾಗ ಒತ್ತುವರಿ ತಡೆಗೆ ಎಸ್‌ಡಿಪಿಐ ಆಗ್ರಹ

Date:

Advertisements

ರಾಯಚೂರು ನಗರದ ಹಜರತ್ ಸೈಯದ್ ಶಾ ಕರೀಮುಲ್ಲಾ ಖಾದ್ರಿ ಶಹೀದ್ ದರ್ಗಾದ ಭೂಮಿ ಒತ್ತುವರಿ ನಡೆಯುತ್ತಿದ್ದು, ಕೂಡಲೇ ತಡೆ ಹಿಡಿಯಬೇಕು ಎಂದು ಎಸ್‌ಡಿಪಿಐ ಪಕ್ಷ ಒತ್ತಾಯಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ಮಸೀದಿಯ ಜಾಗ ಒತ್ತುವರಿ ಕುರಿತು 2019 ರಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಎಲ್ಲಾ ಸಂಬಂಧಪಟ್ಟ ಇಲಾಖೆಗೆಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸುತ್ತಲೇ ಬಂದಿದ್ದೇವೆ, ಆದರೂ ಯಾವುದೇ ಪ್ರಯೋಜನೆವಾಗಲಿಲ್ಲ. ಭೂ ಕಬಳಿಕೆದಾರರು ನಿಯಮಬಾಹಿರವಾಗಿ ಮಸೀದಿಯ ಭೂಮಿ ಒತ್ತುವರಿ ಮಾಡಲು ಎನ್.ಎ. ಮಾಡಿಸಿದ್ದಾರೆ. ಅಲ್ಲದೇ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನೀಲಿ ನಕಾಶೆ ಮತ್ತು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ” ಎಂದು ದೂರಿದರು.

Advertisements

ಈಗಾಗಲೇ ಜಿಲ್ಲಾಡಳಿತಕ್ಕೆ ಸಲ್ಲಿಸಿದ ಪ್ರಸ್ತಾವನೆಯನ್ನು ಮಂಜೂರು ಮಾಡಬಾರದು, ಈ ಭೂಮಿಯನ್ನು ವಕ್ಫ್ ಮಂಡಳಿಯಲ್ಲಿ ನೋಂದಣಿಯಾಗಿದ್ದು, ವಕ್ಫ್ ಆಸ್ತಿಯಾಗಿದೆ, ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಮಸೀದಿ ಜಾಗ ಕಬಳಿಕೆಗೆ ಮಂಜೂರಾತಿ ನೀಡಬಾರದು, ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಹಿರಂಗವಾಗಿ ವಿಜಯೇಂದ್ರನ ಕಾಲಿಗೆ ಬಿದ್ದು ಖೂಬಾಗೆ ಟಿಕೆಟ್ ಕೊಡಬೇಡಿ ಎಂದ ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್!

ಪ್ರತಿಭಟನೆಯಲ್ಲಿ ಪಕ್ಷದ ಅಧ್ಯಕ್ಷ ಜಿಲಾನಿ ಪಾಷಾ, ಉಪಾಧ್ಯಕ್ಷ ಮಾಟೀನ್ ಅನ್ವರ್, ಪ್ರಧಾನ ಕಾರ್ಯದರ್ಶಿ ಎಂಡಿ ಗೌಸ್, ಸೈಯದ್ ಮುರ್ಷಾದ್ ಜಾನಿ, ಮಹಮದ್ ಸಾಹೇಬ್, ಶಫಿ, ತೌಶೀಫ್ ಅಹಮದ್, ಅನ್ಸಾರಿ ಪಾಷಾ, ಆಲಮ್ ಬಾಷಾ ಸೇರಿದಂತೆ ಇತರರಿದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X