ಕೆರಗೋಡು ಧ್ವಜ ವಿವಾದ | ಪ್ರತಿಭಟನೆಗೆ ಕುಮಾರಸ್ವಾಮಿ ಬರುತ್ತಿದ್ದಂತೆಯೇ ಕಾಲ್ಕಿತ್ತ ಬಿಜೆಪಿ ಮುಖಂಡರು!

Date:

Advertisements

ಮುಂದಿನ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ. ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಗೂ ಸುಮಲತಾಗೆ ಬೆಂಬಲ ಸೂಚಿಸುತ್ತಿರುವ ಬಿಜೆಪಿಯ ಕೆಲವು ನಾಯಕರು ಹಾಗೂ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದು ಮಂಡ್ಯದ ಕೆರಗೋಡು ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ನಡೆದ ಪ್ರತಿಭಟನೆಯ ವೇಳೆ ಬಹಿರಂಗಗೊಂಡಿದೆ. ಅದಕ್ಕೆ ಕಾರಣವಾದದ್ದು, ಕೆಲ ಬಿಜೆಪಿ ಮುಖಂಡರ ನಡೆ.

ಮಂಡ್ಯ ಕ್ಷೇತ್ರದ ಟಿಕೆಟ್​ಗಾಗಿ ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವೆ ಪೈಪೋಟಿ ನಡೆಯುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಉಂಟಾಗಿರುವುದನ್ನು ಸೂಚಿಸಿದೆ.

ಮಂಡ್ಯದ ಕೆರಗೋಡು ಗ್ರಾಮದಲ್ಲಿನ ಹನುಮಧ್ವಜ ವಿವಾದವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿಯು ರಾಜ್ಯಾದ್ಯಂತ ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿಯೇ ಬಿಜೆಪಿಯ ದೋಸ್ತಿ ಜೆಡಿಎಸ್ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದೆ.

Advertisements

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಕುಮಾರಸ್ವಾಮಿ ವೇದಿಕೆಗೆ ಆಗಮಿಸುತ್ತಿದ್ದಂತೆ ನೆರೆದಿದ್ದ ಪ್ರತಿಭಟನಾಕಾರರು ಶಿಳ್ಳೆ, ಚಪ್ಪಾಳೆ ಮೂಲಕ ಘೋಷಣೆ ಕೂಗತೊಡಗಿದರು. ಬಿಜೆಪಿ ಮುಖಂಡರೊಬ್ಬರು ಕುಮಾರಸ್ವಾಮಿ ಅವರಿಗೆ ಕೇಸರಿ ಶಾಲು ಹಾಕಿದರು. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಶಾಸಕ ಸಿಟಿ ರವಿ ಅವರು ವೇದಿಕೆಗೆ ಆಹ್ವಾನಿಸಿದರು. ಈ ವೇಳೆ ಕುಮಾರಸ್ವಾಮಿ ಬರುವುದನ್ನು ಗಮನಿಸಿದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಬೆಳವಣಿಗೆಯು ಮೈತ್ರಿಯಲ್ಲಿ ಉಂಟಾಗಿರುವ ಬಿರುಕಿಗೆ ಇಂಬು ನೀಡಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಯೋಚನೆಯಲ್ಲಿದೆ. ಆದರೆ, ಇದಕ್ಕೆ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರು ಒಪ್ಪುತ್ತಿಲ್ಲ. ಮಂಡ್ಯ ಕ್ಷೇತ್ರದ ಟಿಕೆಟ್  ಸುಮಲತಾ ಅವರಿಗೇ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸದೆ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು. ಮಂಡ್ಯವನ್ನ ಜೆಡಿಎಸ್ ನಾಯಕರಿಗೆ ಯಾಕೆ ಕೊಡಬೇಕು ಎಂದು ನಾರಾಯಣಗೌಡ ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೆ, ಜನವರಿ 25 ರಂದು ಸುಮಲತಾರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ವೇಳೆ ಬಿಜೆಪಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ತೆಗೆದುಕೊಂಡಿದ್ದಾರೆ. ಅಲ್ಲದೇ, ಮಂಡ್ಯ ಬಿಟ್ಟು ನನಗೆ ಬೇರೆ ಕಡೆ ಟಿಕೆಟ್‌ ನೀಡಿದರೆ ರಾಜಕೀಯವೇ ಬೇಡ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X