ಒಕ್ಕಲಿಗ ನಾಯಕರನ್ನು ದೇಶದ್ರೋಹಿಗಳೆಂದು ಬಿಂಬಿಸ ಹೊರಟಿದೆಯೇ ಬಿಜೆಪಿ?

Date:

Advertisements
ಇಲ್ಲಿ ಪ್ರಲ್ಹಾದ ಜೋಷಿ, ಬಿಎಲ್‌ ಸಂತೋಷನಂಥವರು ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇವರೆಲ್ಲ ಸಭ್ಯಸ್ಥರಂತೆ, ರಾಷ್ಟ್ರಪ್ರೇಮಿಗಳಂತೆ ಪೋಸ್‌ ಕೊಡುತ್ತಾ ಹಿಂದಿನಿಂದಲೇ ಎಲ್ಲ ಆಟ ಆಡುತ್ತಿದ್ದಾರೆ.

 

ಮಂಡ್ಯದಲ್ಲಿ ಬಿಜೆಪಿ ನಡೆಸುತ್ತಿರುವ ರಾಷ್ಟ್ರಧ್ವಜದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ನಾಯಕರೆಂದರೆ, ಬಿಜೆಪಿಯ ವಿರೋಧಪಕ್ಷದ ನಾಯಕ ಆರ್.ಅಶೋಕ್‌, ಸಿ.ಟಿ.ರವಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಪ್ರಿತಂ ಗೌಡ, ಅಶ್ವತ್‌ನಾರಾಯಣ ಮೊದಲಾದವರು. ಈ ಎಲ್ಲರೂ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಮಂಡ್ಯದ ಪ್ರಕರಣವನ್ನು ಇಡೀ ದೇಶವೇ ಗಮನಿಸುತ್ತಿದೆ. ರಾಷ್ಟ್ರಧ್ವಜ ವರ್ಸಸ್‌ ಭಗವಾಧ್ವಜದ ಈ ಪ್ರಕರಣ ರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾಗುತ್ತಿದೆ. ಮಂಡ್ಯದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಪ್ರತಿಭಟನೆಯಲ್ಲಿ ಒಕ್ಕಲಿಗ ನಾಯಕರನ್ನು ಬಿಟ್ಟರೆ ಉಳಿದ ಯಾರೂ ಕಾಣಿಸುತ್ತಿಲ್ಲ. ಮಾಧ್ಯಮಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್‌ನ ಒಕ್ಕಲಿಗ ನಾಯಕರೇ ರಾಷ್ಟ್ರಧ್ವಜದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಬಹುಶಃ ಬಿಜೆಪಿಯೊಳಗಿನ ಒಕ್ಕಲಿಗರ ಪ್ರಭಾವವನ್ನು ತಗ್ಗಿಸುವ ಬಿಜೆಪಿಯ ಸಂತೋಷ ಬಳಗದ ಮಾಸ್ಟರ್‌ ಪ್ಲಾನ್‌ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ

ಬಿಜೆಪಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಆಟ ಆಡುತ್ತಿರುವುದು ಸ್ಪಷ್ಟವಾಗುತ್ತಿದೆ. ಒಂದು ಕಡೆಯಿಂದ ಸಿದ್ದರಾಮಯ್ಯನವರನ್ನು ಟಾರ್ಗೆಟ್‌ ಮಾಡಿದಂತೆ ಮಾಡಿ, ಇನ್ನೊಂದು ಕಡೆಯಿಂದ ಒಕ್ಕಲಿಗರ ಪ್ರಾಬಲ್ಯದ ಜೆಡಿಎಸ್‌ ಹಾಗೂ ಬಿಜೆಪಿಯ ಒಕ್ಕಲಿಗ ನಾಯಕರನ್ನು ಮುಗಿಸುವ ಖತರ್ನಾಕ್‌ ಷಡ್ಯಂತ್ರ ಮಾಡುತ್ತಿದೆ. ಇಡೀ ದೇಶದ ಜನರ ಮುಂದೆ ಒಕ್ಕಲಿಗ ಸಮುದಾಯದ ನಾಯಕರು ದೇಶದ್ರೋಹಿಗಳೆಂದು ಬಿಜೆಪಿ ಬಿಂಬಿಸಲು ಹೊರಟಿದೆ.

download 2

ಇಲ್ಲಿ ಪ್ರಲ್ಹಾದ ಜೋಷಿ, ಸಂತೋಷನಂಥವರು ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ? ಇವರೆಲ್ಲ ಸಭ್ಯಸ್ಥರಂತೆ, ರಾಷ್ಟ್ರಪ್ರೇಮಿಗಳಂತೆ ಪೋಸ್‌ ಕೊಡುತ್ತಾ ಹಿಂದಿನಿಂದಲೇ ಎಲ್ಲ ಆಟ ಆಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೂ ಮೊದಲು ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸಿತ್ತು ಬಿಜೆಪಿ. ಆದರೆ, ಆ ಸಮುದಾಯ ಪ್ರಜ್ಞಾವಂತಿಕೆ ಮೆರೆಯುವ ಮೂಲಕ ಬಿಜೆಪಿಯ ಕುತಂತ್ರವನ್ನು ನಿಷ್ಫಲಗೊಳಿಸಿತ್ತು. ಆದರೆ, ಈಗ ಮತ್ತೆ ಬಿಜೆಪಿ ರಾಷ್ಟ್ರಧ್ವಜ ವರ್ಸಸ್‌ ಭಗವಾಧ್ವಜ ಎಂಬ ಆಟದ ಮೂಲಕ ಒಕ್ಕಲಿಗ ನಾಯಕರನ್ನು ಮುಂದೆಬಿಟ್ಟು, ಅವರನ್ನು ಮುಗಿಸಲು ಹೊರಟಿರುವುದು ನಿಜಕ್ಕೂ ಹೇಯ ರಾಜಕಾರಣ. ಒಕ್ಕಲಿಗ ಸಮುದಾಯ ಇದನ್ನು ಅರ್ಥ ಮಾಡಿಕೊಳ್ಳದಿದ್ದರೆ ಇಡೀ ಸಮುದಾಯವೇ ದೇಶದ್ರೋಹದ ಆರೋಪ ಹೊತ್ತುಕೊಳ್ಳುವಂತೆ ಮಾಡುವಲ್ಲಿ ಬಿಜೆಪಿ ಸಫಲವಾಗುತ್ತದೆ. ಬಿಜೆಪಿಯ ಈ ಕುತಂತ್ರವನ್ನು ಸೋಲಿಸುವ ಜವಾಬ್ದಾರಿ ಎಲ್ಲ ಒಕ್ಕಲಿಗ ಸಮುದಾಯದ ಜನರ ಮೇಲಿದೆ.

Advertisements
ಶರಣ ಚಿಂತಕ ಜೆ.ಎಸ್.ಪಾಟೀಲ್
ಡಾ ಜೆ ಎಸ್‌ ಪಾಟೀಲ್‌
+ posts

ಬಸವ ತತ್ವ ಪ್ರಚಾರಕ, ಪ್ರಗತಿಪರ ಚಿಂತಕ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ ಜೆ ಎಸ್‌ ಪಾಟೀಲ್‌
ಡಾ ಜೆ ಎಸ್‌ ಪಾಟೀಲ್‌
ಬಸವ ತತ್ವ ಪ್ರಚಾರಕ, ಪ್ರಗತಿಪರ ಚಿಂತಕ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ವಿರುದ್ಧ ತೊಡೆ ತಟ್ಟಿದ ಇಂಡಿಯಾ ಒಕ್ಕೂಟ: ಕೆಟ್ಟ ವ್ಯವಸ್ಥೆಯ ವಿರುದ್ಧ ಹೋರಾಟ

ಭಾರತದ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಒಂದು ನಿರ್ಣಾಯಕ ಘಟ್ಟವಾಗಿದೆ. ಇದು ಕೇವಲ ಒಂದು...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಧರ್ಮಸ್ಥಳ ಪ್ರಕರಣ | ಬಿಜೆಪಿಯವರು ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಕ್ಕಿಂತ ವಿತಂಡವಾದದಲ್ಲಿ ಮುಳುಗಿದ್ದೇ ಹೆಚ್ಚು!

ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ...

ರಾಜ್ಯ ಶಿಕ್ಷಣ ನೀತಿ ಆಯೋಗ: ಶಾಲಾ ಶಿಕ್ಷಣ ಕುರಿತ ಹೊಸ ಅಂಶಗಳೇನು?

ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಎಂಬುದು ಭಾರತೀಯ ಜ್ಞಾನದ ನೆಲೆಯಲ್ಲಿ ರೂಪಿಸಲಾಗಿದೆ....

Download Eedina App Android / iOS

X