ಬೆಂಗಳೂರು ವಿಶ್ವವಿದ್ಯಾಲಯ | ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ: ‘ಕಟ್ಟುಪಾಡು ಬದಲಾಗದು’ ಎಂದ ವಿದ್ಯಾರ್ಥಿಗಳು

Date:

Advertisements

ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ. 1,400 ಎಕರೆ ವಿಸ್ತೀರ್ಣದ ವಿಶಾಲ ಪ್ರದೇಶದಲ್ಲಿರುವ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆವರಣದಲ್ಲಿರುವ ಹಾಸ್ಟೆಲ್‌ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಾಸ ಮಾಡುತ್ತಿದ್ದಾರೆ. ಆದರೆ, ಹಾಸ್ಟೆಲ್‌ನಲ್ಲಿ ನೀಡುವ ಊಟದ ಬಗ್ಗೆ ಕಳೆದ ಎರಡು ತಿಂಗಳ ಅಂತರದಲ್ಲಿ ಮತ್ತೆ ಆರೋಪ ಕೇಳಿಬಂದಿದೆ.

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಊಟದಲ್ಲಿ ಮತ್ತೆ ಹುಳು ಪತ್ತೆಯಾಗಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕವನ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ‘ಕಟ್ಟುಪಾಡು ಬದಲಾಗದು’ ಎಂಬ ಶೀರ್ಷಿಕೆಯಡಿ ಕವನ ರಚಿಸಿ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಕಟ್ಟುಪಾಡು ಬದಲಾಗದು
ಬದಲಿಸಲು ಮುಂದೆ ಬಂದರೆ
ಎತ್ತಂಗಡಿ ಕಟ್ಟಿಟ್ಟ ಬುತ್ತಿ

Advertisements

ಅಣವಾಳೂವ
ವಿದ್ಯೆಯಲ್ಲಿ
ಸರಿದಾರಿಯಲ್ಲೇ ಬಚ್ಚಿಟ್ಟ ಬುತ್ತಿ

ವಿದ್ಯಾರ್ಥಿ ಪಟ್ಟ
ಅತ್ಯಂತ ಸುರಕ್ಷಿತ ಕಾಲವಿದು

ಅಲ್ಲಿ ವಿರೋಧ
ಕೋಟೆ ಕಟ್ಟ ಕೂಡದು

ಅನ್ಯಾಯ ಶಕ್ತಿ ವಿರುದ್ಧ
ಧನಿ ಎತ್ತ ಕೂಡದು

ಕತ್ತಿಯಿಂದ ಕೊಯ್ದರೂ
ಎತ್ತಿದ ನಾಲಿಗೆಯ
ಯಾರಿಗೂ ತೋರಿಸ ಕೂಡದು

ಬರೆವ ಶಕ್ತಿ ಶಾಯಿಯಿದ್ದರೂ
ಕಾಗದ ಕೊಡ ಕೂಡದು

ಬರೆದು ಮಡಚಿ ಕೊಟ್ಟರು
ತಮ್ಮೆಸರಿನ ಸುಳಿವು ಬಿಡ ಕೂಡದು

ತಟ್ಟೆಯಲಿ ತನ್ನದೆ ಮನೆ
ಎಂದರಿತರೂ ಬೆಂಕಿ ಹಚ್ಚ ಕೂಡದು
ಇನ್ನೇನು ಮಾಡುವುದು ನೀವೆ ಹೇಳಿ!

-ಅನಾಮಧೇಯ
ಮೂಲೆ ಮನೆ
ಜ್ಞಾನಭಾರತಿ ವಠಾರ

ಹೀಗೆ ಕವನದ ಮೂಲಕ ಹಾಸ್ಟೆಲ್‌ನ ಅವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದೆ. ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿಕೊಳ್ಳಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

2023ರಲ್ಲಿ ಇದೇ ಹಾಸ್ಟೆಲ್‌ನಲ್ಲಿ ಊಟದಲ್ಲಿ ಹುಳು ಪತ್ತೆಯಾಗಿತ್ತು. ವಿದ್ಯಾರ್ಥಿಗಳು ಈ ವಿರುದ್ಧ ಪ್ರತಿಭಟನೆ ನಡೆಸಿದ್ದರು. ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ. ಊಟ, ನೀರು ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X