ವಿಜಯಪುರ | ಹಲವು ಬೇಡಿಕೆ ಈಡೇರಿಕೆಗೆ ಒಡಲದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟ ಆಗ್ರಹ

Date:

Advertisements

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೋಳರುಗಿ ಗ್ರಾಮದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದ ಮುಂದೆ ಸ್ವಚ್ಛಗೊಳಿಸಲು ಆಗ್ರಹಿಸಿ ಒಡಲು ದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟದಿಂದ ಕೊಳೂರು ಗ್ರಾಮ ಪಂಚಾಯಿತಿ ಪಿಡಿಒಗೆ ಮನವಿ ಸಲ್ಲಿಸಿದರು.

ಒಕ್ಕೂಟದ ಅಧ್ಯಕ್ಷೆ ಇಂದು ಹೊಸಮನಿ ಮಾತನಾಡಿ, “ಸಾವಳಗಿ ಗ್ರಾಮದಲ್ಲಿರುವ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನದ ಸುತ್ತಮುತ್ತ ಸ್ವಚ್ಛಗೊಳಿಸಬೇಕು. ಗರಸು ಹಾಕಿಸಿ ಜಲಜೀವನ ಮಿಷನ್ ನೀರಿನ ಸೌಲಭ್ಯ ಮತ್ತು ಕಾಂಪೌಂಡ್ ಗೋಡೆ ಮತ್ತು ಶೌಚಾಲಯ ನಿರ್ಮಿಸಬೇಕು” ಎಂದು ಒತ್ತಾಯಿಸಿದರು.

“ಒಡಲದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟದಿಂದ ಸಂಜೆ ತರಗತಿ ನಡೆಸುತ್ತಿದ್ದೇವೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮುದಾಯ ಭವನದಲ್ಲಿ ಈ ತರಬೇತಿ ನಡೆಸಲಾಗುತ್ತದೆ.
ಸಮುದಾಯ ಭವನದ ಸುತ್ತಮುತ್ತ ಕೊಳಚೆ ನೀರು, ಗಲೀಜು ಇರುವುದರಿಂದ ಮಕ್ಕಳಿಗೆ ತರಬೇತಿ ನಡೆಸಲು ಆಗುತ್ತಿಲ್ಲ. ಕೊಳಚೆ ನೀರಿನ ಗಬ್ಬು ವಾಸನೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಇದರಿಂದ ಮಕ್ಕಳು ಡೆಂಗಿ ಜ್ವರ, ಕೆಮ್ಮು ನೆಗಡಿ ಇತರ ರೋಗಗಳಿಗೆ ತುತ್ತಾಗುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಈ ಸಮುದಾಯ ಭವನದಲ್ಲಿ ಸ್ಥಳೀಯ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಉಚಿತ ತರಬೇತಿ(ಟ್ಯೂಷನ್) ಕೇಂದ್ರವನ್ನು ಆರಂಭಿಸಿದ್ದೇವೆ.
ಹಾಗೂ ಪ್ರತಿ ಶನಿವಾರ ಮತ್ತು ಭಾನುವಾರ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟ ಮತ್ತು ಸ್ಥಳೀಯ ಸ್ವ ಸಹಾಯ ಸಂಘಗಳ ಸಭೆ ನಡೆಸಲಾಗುತ್ತದೆ. ಸಮುದಾಯ ಭವನದ ಮುಂಭಾಗದಲ್ಲಿ ಕಸದ ತಿಪ್ಪೆಗಳಿವೆ. ಅದರ ಸುತ್ತಮುತ್ತ ತುಂಬಾ ಕೊಳಚೆ ವಾಸನೆ ಬರುತ್ತಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದಕ್ಕೆ ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಾಲೇಜಿಗೆ ಹೋಗೆಂದಿದ್ದಕ್ಕೆ ಬಾವಿಗೆ ಹಾರಿದ ಯುವತಿ; ಅಣ್ಣನೂ ಸಾವು

“ಮನವಿಗೆ ಸರಿಯಾಗಿ ಸ್ಪಂದಿಸದಿದ್ದರೆ ಮುಂದಿನ ಹಂತದಲ್ಲಿ ಹೋರಾಟ ಮಾಡಲು ಸಿದ್ದರಾಗುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ರಾಜಶ್ರೀ ಮಕನಾಪುರ್, ಜ್ಯೋತಿ ಹೊಸಮನಿ, ಸುಜಾತ ಚಲವಾದಿ, ಸುನಿಲ್ ಹೊಸಮನಿ, ಬಸವರಾಜ್ ಕಾಂಬ್ಳೆ, ಲಕ್ಷ್ಮಿ ಕಟ್ಟಿಮನಿ, ಪಾರ್ವತಿ ಹರಿಜನ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X