ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್ ಕಾಲಿಗೆ ಬಿದ್ದ ಬಿ ವೈ ವಿಜಯೇಂದ್ರ

Date:

Advertisements
  • ಮಾಜಿ ಡಿಸಿಎಂ ಆಶೀರ್ವಾದ ಪಡೆದ ಮಾಜಿ ಸಿಎಂ ಪುತ್ರ
  • ಏಕಕಾಲಕ್ಕೆ ಎಡೆಯೂರು ದೇವಸ್ಥಾನಕ್ಕೆ ಆಗಮಿಸಿದ್ದ ಗಣ್ಯರು

ತುಮಕೂರು ಜಿಲ್ಲೆಯ ಎಡೆಯೂರು ದೇವಸ್ಥಾನದಲ್ಲಿ ಬಿ ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಕಾಲಿಗೆ ಬಿದ್ದು ನಮಸ್ಕರಿಸಿರುವ ಘಟನೆ ನಡೆದಿದೆ.

ಬಿಜೆಪಿ ಮುಖಂಡ ಬಿ.ವೈ ವಿಜಯೇಂದ್ರ ಕುಣಿಗಲ್ ತಾಲೂಕಿನ ಎಡೆಯೂರು ದೇವಸ್ಥಾನದಲ್ಲಿ ದೇವರ ದರ್ಶನಕ್ಕೆಂದು ಆಗಮಿಸಿದ್ದರು. ಇದೇ ವೇಳೆ ಕಾಂಗ್ರೆಸ್‌ ನಾಯಕ ಜಿ.ಪರಮೇಶ್ವರ್ ಕೂಡ ದೇವರ ದರ್ಶನಕ್ಕೆಂದು ಆಗಮಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

Advertisements

ಇಬ್ಬರು ಗಣ್ಯರು ದೇವಸ್ಥಾನದ ಮುಂಭಾಗದಲ್ಲಿ ಪರಸ್ಪರ ಎದುರಾದಾಗ ಉಭಯ ಕುಶಲೋಪರಿ ನಡೆಸುತ್ತಾ ಯಡಿಯೂರು ಸಿದ್ದಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ಅಲ್ಲಿದ್ದ ಕೆಲವರು ಪರಮೇಶ್ವರ್ ಗೆ ಸನ್ಮಾನ ಮಾಡಲು ಶಾಲನ್ನು ತಂದಿದ್ದರು. ಅದೇ ಶಾಲನ್ನು ಪಡೆದ ಪರಮೇಶ್ವರ್‌ ವಿಜಯೇಂದ್ರ ಅವರಿಗೆ ಹೊದಿಸಿದರು. ಇದಕ್ಕೆ ತಲೆ ಭಾಗಿದ ವಿಜಯೇಂದ್ರ ಪರಮೇಶ್ವರ್ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X