ಗದಗ | ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು: ಸುರೇಶ ಚಲವಾದಿ

Date:

Advertisements

ಎಲ್ಲ ಜಾತಿ ವರ್ಗದ ಜನರೂ ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು. ಆಗ ಮಾತ್ರ ಅಸ್ಪೃಷ್ಯತೆ ತೊಲಗಲು ಸಾಧ್ಯ ಎಂದು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ್ ಚಲವಾದಿ ಹೇಳಿದ್ದಾರೆ.

ಗದಗ ಜಿಲ್ಲೆಯ ಕದಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭಾರತದ ಪ್ರತಿಯೊಬ್ಬ ಪ್ರಜೆಗೂ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಬದುಕಲು ಸಮಾನ ಅವಕಾಶವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿದ್ದಾರೆ. ಅದರ ಭಾಗವಾಗಿ ಪ್ರಜ್ಞಾವಂತ ನಾಗರಿಕ ಬಂಧುಗಳು ಸಂವಿಧಾನದ ಆಶಯಗಳಿಗೆ ಬದ್ದರಾಗಿ ಸಾಮರಸ್ಯದ ಬದುಕನ್ನು ಕಟ್ಟಿಕೊಳ್ಳಬೇಕು ಅಂದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ” ಎಂದರು.

“ಬುದ್ದ ಬಸವ ಅಂಬೇಡ್ಕರ್ ಕಾಲದಿಂದ ಹಿಡಿದು ಪ್ರಸ್ತುತ ದಿನಮಾನದಲ್ಲಿಯೂ ಅಸ್ಪೃಷ್ಯತೆ ಆಚರಣೆಯಲ್ಲಿರುವುದು ನೋವಿನ ಸಂಗತಿ. ಅಸ್ಪೃಷ್ಯತೆ ನಿರ್ಮೂಲನೆ ಮಾಡಲು ಇಂತಹ ತಿಳುವಳಿಕೆ ಕಾರ್ಯಕ್ರಮವನ್ನು ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಾರ್ಯ ಶ್ಲಾಘನೀಯ. ಇಷ್ಟೆಲ್ಲಾ ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಾಗ್ಯೂ ಸಹಿತ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಅಸ್ಪೃಷ್ಯತೆ ಇನ್ನೂ ಜೀವಂತ ಇರುವದು ದುರಂತವೇ ಸರಿ. ಅಂತಹ ಗ್ರಾಮಗಳನ್ನು ಗುರ್ತಿಸಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಇನ್ನೂ ಹೆಚ್ಚು ಕಾನೂನು ತಿಳುವಳಿಕೆ ನೀಡಿ ಜಿಲ್ಲೆಯಲ್ಲಿ ಸಾಮರಸ್ಯದ ಬದುಕು ನಿರ್ಮಿಸಲು ಶ್ರಮವಹಿಸಬೇಕು” ಎಂದು ಹೇಳಿದರು.

Advertisements

ತಾಲೂಕ ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷ್ಮೀ ಇಂಗಳಳ್ಳಿ ಮಾತನಾಡಿ, “ಗ್ರಾಮೀಣ ಪ್ರದೇಶದ ಕೆಲವು ಗ್ರಾಮಗಳಲ್ಲಿ ಅಸ್ಪ್ರಷ್ಯತೆ ಇನ್ನೂ ಜೀವಂತವಿರುವದು ತುಂಬಾ ನೋವಿನ ಸಂಗತಿ ಇಂತಹ ಪ್ರಕರಣಗಳನ್ನು ಹೋಗಲಾಡಿಸಲು ಇಲಾಖೆ ಶ್ರಮಿಸುತ್ತಿದೆ. ಶೋಷಿತರ ಪರವಾಗಿ ನಮ್ಮ ಇಲಾಖೆ ಹಾಗೂ ನಮ್ಮ ಮೇಲಾಧಿಕಾರಿಗಳು ಸದಾಕಾಲ ಶ್ರಮಿಸುತ್ತೇವೆ” ಎಂದು ಹೇಳಿದರು.

ಜೇನುಗೂಡು ಕಲಾ ತಂಡ ಹಾಗೂ ಪ್ರಥ್ವಿಪ್ರಿಯಾ ಸಾರ್ವತ್ರಿಕ ಸೇವಾ ಸಂಸ್ಥೆಯವರು ಅಸ್ಪ್ರಷ್ಯತೆಯ ಕುರಿತು ಕ್ರಾಂತಿಗೀತೆ ಹಾಗೂ ಬೀದಿ ನಾಟಕ ಪ್ರದರ್ಶನ ಮಾಡಿ ಜನರಲ್ಲಿ ಜಾಗ್ರತಿ ಮೂಡಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸಂಶಿಯವರು ಅಸ್ಪ್ರಷ್ಯತೆಯ ಆಚರಣೆಯಿಂದಾಗುವ ಮಾನದಂಡಗಳ ಕುರಿತು ಕಾನೂನು ತಿಳುವಳಿಕೆ ನೀಡಿದರು.ಈ ಸಂದರ್ಭದಲ್ಲಿ ಡಿ.ವೈ ಎಸ್ಪಿ ಗದಗ.ತಹಶಿಲ್ದಾರ್ ಗದಗ.ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕರಾದ ಶ್ರೀಮತಿ ಮಂಜುಳಾ ಅವರು.ತಾಲೂಕಾ ಪಂಚಾಯ್ತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ಪಂಚಾಯ್ತಿ ಆಢಳಿತ ಮಂಡಳಿ ಹಾಗೂ ಗ್ರಾಮದ ಸಮಸ್ತ. ಗುರು ಹಿರಿಯರು ಯುವಕ ಮಿತ್ರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X