ಕಲಬುರಗಿ | ಪ್ರಕರಣಗಳಿಗೆ ಸರಿಯಾದ ಸಾಕ್ಷಿ ಇದ್ದರೆ ಶಿಕ್ಷೆ ಖಚಿತ: ಎಸ್‌ಪಿ ಶ್ರೀನಿವಾಸಲು

Date:

Advertisements

ಅಪರಾಧಗಳ ಬಗ್ಗೆ ಸಾಕ್ಷಿಯಾದರು ಸರಿಯಾದ ಮತ್ತು ನಿಖರವಾದ ಸಾಕ್ಷಿ ಒದಗಿಸಿದರೆ, ಅಪರಾಧಿಗಳಿಗೆ ಶಿಕ್ಷೆಯಾಗುವು ಖಚಿತ ಎಂದು ಕಲಬುರ್ಗಿ ಜಿಲ್ಲಾ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ದಲಿತ ದಿನಾಚರಣೆ ಅಂಗವಾಗಿ 112 ಸಹಾಯವಾಣಿಯ ಕರಪತ್ರ ಹಾಗೂ ಬೀಟ್ ಸಿಬ್ಬಂದಿಗಳ ಮಾಹಿತಿಯ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಶಹಾಬಾದ ಸಿಪಿಐ ನಟರಾಜ ಲಾಡೆ ,ಮಾಡಬೂಳ ಪಿಎಸ್ಐ ಚೇತನ್ ಪೂಜಾರ ಕ್ರೈಂ ಪಿಎಸ್‌ಐ ಶೀಲಾದೇವಿ ಪೋಸ್ಟರ್‌ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‌ಪಿ ಅಡ್ಡೂರು ಶ್ರೀನಿವಾಸಲು, “ಇತ್ತೀಚೆಗೆ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ನೂರು ದೂರುಗಳ ಪೈಕಿ ಸರಿಯಾದ ಸಾಕ್ಷಿ ಇಲ್ಲದೆ, ಕೇವಲ ಬೆರಳೆಣಿಕೆಯಷ್ಟು ಆರೋಪಿಗಳಿಗೆ ಮಾತ್ರ ಶಿಕ್ಷೆಯಾಗುತ್ತಿದೆ” ಎಂದರು.

Advertisements

“ಪಿರ್ಯಾದುದಾರರು ಘಟನೆಯ ಬಗ್ಗೆ ನಿಖರವಾದ ಮಾಹಿತಿ ನೀಡದೆ, ಯಾವುದೋ ಕಾರಣಕ್ಕಾಗಿ ಇಲ್ಲಸಲ್ಲದ ವಿಷಯಗಳನ್ನು ಸೇರಿಸಿ ದೂರು ದಾಖಲಿಸುತ್ತಿರುವುದು ಸರಿಯಲ್ಲ. ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳು ಹಾಗೂ ನಿಖರ ಮಾಹಿತಿಯೊಂದಿಗೆ ದೂರು ಸಲ್ಲಿಸಿದಾಗ ಮಾತ್ರ ಪ್ರಕರಣವನ್ನು ಭೇದಿಸಲು ಸಾಧ್ಯವಾಗುತ್ತದೆ. ಅದರಲ್ಲಿಯೂ ಜಾತಿನಿಂದನೆ ದೌರ್ಜನ್ಯದ ವಿಷಯದಲ್ಲಿ ಹೆಚ್ಚಾಗಿ ಇಂತಹ ವಿಷಯಗಳು ಕಾಣಸಿಗುತ್ತಿವೆ. ಸಾರ್ವಜನಿಕರು ಮತ್ತು ಪ್ರತ್ಯಕ್ಷದರ್ಶಿಗಳು ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುನೀಲ್ ದೊಡ್ಮನಿ, ಮಲ್ಲಪ್ಪ ಹೊಸ್ಮನಿ, ಗುಂಡು ಮತ್ತಿಮೂಡ,ಆನಂದ ಮಸ್ಕಿ,ನಾಗರಾಜ ಸಜ್ಜನ್ ಇಂಗನಕಲ್ ಸೇರಿದಂತೆ ಮುಖಂಡರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಕಲ್ಲಪ್ಪ ಎಸ್ಐ,ಲಕ್ಷ್ಮಣ ಎಸ್ಐ,ಕಮಲಾಕರ್,ಪ್ರಶಾಂತ ಹೇರೂರ್,ವೀರಶೆಟ್ಟಿ,ಸಂಗಣ್ಣ,ಶಾಂತಮಲ್ಲು ಸೇರಿದಂತೆ ಅನೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X