ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು: ವಾರಣಾಸಿ ನ್ಯಾಯಾಲಯ

Date:

Advertisements

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯವಯ ಇಂದು ಆದೇಶ ನೀಡಿರುವುದಾಗಿ ‘ದಿ ಲೈವ್ ಲಾ’ ವರದಿ ಮಾಡಿದೆ.

ಸದ್ಯ ಜ್ಞಾನವಾಪಿ ಮಸೀದಿಯಲ್ಲಿ ಬೀಗ ಮುದ್ರೆ ಹಾಕಿಡಲಾಗಿರುವ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ವಾರಣಾಸಿಯ ನ್ಯಾಯಾಲಯವೊಂದು ಅವಕಾಶ ಕಲ್ಪಿಸಿದ್ದು, ವಾರದೊಳಗೆ ಇದಕ್ಕೆ ವ್ಯವಸ್ಥೆ ಕಲ್ಪಿಸುವಂತೆಯೂ ಆದೇಶದಲ್ಲಿ ನ್ಯಾಯಾಲಯವು ಉಲ್ಲೇಖಿಸಿರುವುದಾಗಿ ವರದಿ ಮಾಡಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

Advertisements

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರ್ಜಿದಾರರಾದ ಐವರು ಹಿಂದೂ ಮಹಿಳೆಯರ ಪರ ವಕೀಲ ವಿಷ್ಣು ಶಂಕರ್ ಜೈನ್, “ಇದೊಂದು ಮಹತ್ವದ ಆದೇಶವಾಗಿದೆ. ಆದೇಶದಂತೆಯೇ ವಾರದೊಳಗೆ ಅಲ್ಲಿ ನಾವು ಪೂಜೆ ಮಾಡಲಿದ್ದೇವೆ. ಎಲ್ಲರಿಗೂ ಪೂಜೆ ಮಾಡಲು ಹಕ್ಕಿದೆ” ಎಂದು ತಿಳಿಸಿದ್ದಾರೆ.

“ಮಸೀದಿಯಲ್ಲಿ ಒಟ್ಟು ನಾಲ್ಕು ನೆಲಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನು ಓದಿದ್ದೀರಾ? ಲಡಾಕ್‌ನೊಳಗೆ ನುಸುಳಿದ್ದ ಚೀನಾದ ಸೈನಿಕರನ್ನು ಹಿಮ್ಮೆಟ್ಟಿಸಿದ ಭಾರತೀಯ ಕುರಿಗಾಹಿಗಳು: ವಿಡಿಯೋ ವೈರಲ್

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಇತ್ತೀಚೆಗೆ ಬಹಿರಂಗಪಡಿಸಿತ್ತು. ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆಯೇ ಮಸೀದಿ ನಿರ್ಮಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದ ಬೆನ್ನಲ್ಲೇ ನ್ಯಾಯಾಲಯದಿಂದ ಈ ಆದೇಶ ಹೊರಬಿದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಹಿಂದೂಗಳ ಒಂದೊಂದು ದೇವರಿಗೆ ಒಂದೊಂದು ಮಸೀದಿಗಳನ್ನು, ನ್ಯಾಯಾಲಯಗಳು ಒದಗಿಸಿ ಕೊಡುತ್ತಿವೆ. ಎಂತಹ ವಿಡಂಬನೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X