ವಿಜಯಪುರ | ಕುಷ್ಠ ರೋಗ ನಿರ್ಮೂಲನಾ ದಿನಾಚರಣೆ

Date:

Advertisements

ಕುಷ್ಟರೋಗವನ್ನು ಕಳಂಕವೆಂದು, ಆ ರೋಗಿಗಳನ್ನು ಮುಚ್ಚಿಸಿಕೊಳ್ಳಬಾರದೆಂಬ ಮೂಡನಂಬಿಕೆ ಜನರಲ್ಲಿ ತುಂಬಿಕೊಂಡಿದೆ. ಇಂತಹ ಅಪನಂಬಿಕೆಯ ವಿರುದ್ಧ ಅರಿವು ಮೂಡಿಸಲು ಅನೌಪಚಾರಿಕ ಶಿಕ್ಷಣ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖಂಡ ಫಾದರ್ ಟಿಯೊಲ್ ಮಚಾದೊ ಹೇಳಿದ್ದಾರೆ.

ವಿಜಯಪುರದ ಮಹಾತ್ಮ ಗಾಂಧಿ ಕಾಲೋನಿಯಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ನವಜೀವನ್ ಒಕ್ಕೂಟ ಆಯೋಜಿಸಿದ್ದ ಕುಷ್ಠ ರೋಗ ನಿರ್ಮೂಲನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ಕುಷ್ಟ ರೋಗಿಗಳು ಇಚ್ಛಾಸಕ್ತಿ ಇದ್ದರೆ ಏನೆಲ್ಲ ಮಾಡಬಹುದು ಎಂಬುದಕ್ಕೆ ಮಹಾತ್ಮ ಗಾಂಧಿ ಕಾಲೋನಿಯಲ್ಲಿದ್ದ ರೋಗಿಗಳೇ ನಿದರ್ಶನ. ಒಂದು ವರ್ಷದಲ್ಲಿ ಕುಷ್ಠ ರೋಗ ಪತ್ತೆ ಹಚ್ಚಲು 101 ಕ್ಯಾಂಪುಗಳನ್ನು ಮಾಡಿದ್ದೇವೆ. ಅದರಲ್ಲಿ ಬರಿ ಕುಷ್ಟರೋಗ ಮಾತ್ರವಲ್ಲದೆ, ಇತರ ಕಾಯಿಲೆಗಳನ್ನು ಕೂಡ ಪತ್ತೆಹಚ್ಚಲಾಗಿದೆ” ಎಂದರು.

“ಇವತ್ತಿನ ದಿನಮಾನಗಳಲ್ಲಿ ಬಿಪಿ, ಶುಗರ್ ಸಣ್ಣ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುತ್ತಿದೆ. ನಮ್ಮ ಸಂಸ್ಥೆಯ ಸೇವಕರು ಇಂಥ ಹಲವಾರು ರೋಗಿಗಳ ಮಧ್ಯೆ ಸುಮಾರು 30 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಸರ್ಕಾರವು ಸಹಾಯ ಮಾಡುತ್ತಿದೆ” ಎಂದರು.

Advertisements

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಬಸವರಾಜ್ ಹುಬ್ಬಳ್ಳಿ, “ನಾವು ಬರೀ ನಮ್ಮ ಆಸ್ಪತ್ರೆಗೆ ಬಂದವರಿಗೆ ಮಾತ್ರ ಚಿಕಿತ್ಸೆ ಕೊಡುತ್ತೇವೆ. ಆದರೆ, ಸಂಸ್ಥೆಯು ಹಳ್ಳಿ ಹಳ್ಳಿಗೆ ಹೋಗಿ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ” ಎಂದರು.

ಕಾರ್ಯಕ್ರಮದಲ್ಲಿ ಫಾದರ್ ಫ್ಯಾನ್ಸಿಸ್ ಮೆನೆಜೆಸ್, ಡಾ. ಸಂಪತ್ ಗುಣಾರಿ, ಸಿಸ್ಟರ್ ಶಾಂತಿ, ಕರಿಷ್ಮಾ ಶಿಂದೆ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು, ಮಹಾತ್ಮ ಗಾಂಧಿ ಕಾಲೋನಿಯ ಎಲ್ಲಾ ಗಣ್ಯರು ಊರಿನ ಹಿರಿಯರು ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X