ದೇಶದಲ್ಲಿ ಕಾಂಗ್ರೆಸ್‌ 20 ಸ್ಥಾನ ಗೆದ್ದರೆ ಅದೇ ಹೆಚ್ಚು: ಸಿ ಟಿ ರವಿ ಲೇವಡಿ

Date:

Advertisements

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈ ಸಲ ಅದು ಕೂಡ ಗೆಲ್ಲೋದಿಲ್ಲ. ದೇಶದಲ್ಲಿ 20 ಸ್ಥಾನ ಗೆದ್ದರೆ ಅದೇ ಹೆಚ್ಚು ಎಂದು ಸಿ ಟಿ ರವಿ ಹೇಳಿದರು.

ಬಳ್ಳಾರಿ ನಗರದ ಬಸವ ಭವನದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಬಿಜೆಪಿ ದೇಶಾದ್ಯಂತ 400 ಸ್ಥಾನ ಗೆದ್ದೇ ಗೆಲ್ಲುತ್ತದೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ” ಎಂದರು.

“ಇಂಡಿಯಾ ಒಕ್ಕೂಟ ಆರಂಭದಲ್ಲಿ ಒಂದೆರಡು ಮೀಟಿಂಗ್‌ನಲ್ಲಿ ದೊಡ್ಡ ಸದ್ದು ಮಾಡಿತ್ತು. ಮೂರನೇ ಮೀಟಿಂಗ್ ಡಮಾರ್ ಆಯ್ತು. ದೇಶದಲ್ಲಿ ರಾಮಮಂದಿರ ನಿರ್ಮಾಣದ ಬಳಿಕ ಸರ್ವಂ ರಾಮಮಯಂ ಆಗಿದೆ” ಎಂದರು.

Advertisements

“ಸಿದ್ದರಾಮಯ್ಯ ಕೂಡ ಜೈಶ್ರೀರಾಂ ಅನ್ನೋ ಹಾಗೇ ಆಯ್ತು. ನಲವತ್ತು ವರ್ಷದ ರಾಜಕಾರಣದಲ್ಲಿ ರಾಮಮಂದಿರ ಕಟ್ಟಬೇಕೆಂದು ಒಮ್ಮೆಯೂ ಹೇಳಿಲ್ಲ. ಸಿದ್ದರಾಮಯ್ಯ ಬಾಯಿಯಲ್ಲಿ ಜೈಶ್ರೀರಾಮ್ ಬಂದಿದೆ ಅಂದರೆ, ಕಾಂಗ್ರೆಸ್ ನವರಿಗೆ ಗೊತ್ತಾಗಿದೆ ಬಿಜೆಪಿ ಗೆಲ್ಲುತ್ತದೆ ಎಂದು” ಎಂದರು.

ಧ್ವಜ ವಿಚಾರವಾಗಿ ಮಾತನಾಡಿ, “ಮಂಡ್ಯ ವಿಚಾರದಲ್ಲಿ ಮಹಾ ಅಪರಾಧವಾಗಿದೆ. ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ. ರಾಷ್ಟ್ರಧ್ವಜ ಹಾರಿಸಲು ಬೇಡ ಅಂದವರಾರು? ಹನುಮ ಧ್ವಜ ಇಳಿಸಿ ಹಾರಿಸಬೇಕಿತ್ತೇ? ಅದಕ್ಕಿಂತ ದೊಡ್ಡ ಸ್ತಂಬದ ಮೇಲೆ ಎತ್ತರದ ರಾಷ್ಟ್ರ ಧ್ವಜ ಹಾರಿಸಿ. ಹನುಮ ಧ್ವಜ ಮತ್ತು ರಾಷ್ಟ್ರ ಧ್ವಜ ಜಗಳ ಹಚ್ಚಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

“ಮೋದಿ ಮುಂದೆ ಕಾಂಗ್ರೆಸ್ ಬ್ಲ್ಯಾಕ್‌ಮೇಲ್ ರಾಜಕೀಯ ನಡೆಯೋದಿಲ್ಲ. ಹಾಲಿಂದ ಆಲ್ಕೋಹಾಲಿನ ದರ ಏರಿಕೆ ಮಾಡಿದ್ದಾರೆ. ಲಕ್ಷಣ ಸವದಿ ಸೇರಿದಂತೆ ದೇಶ ಮುಖ್ಯ ಎನ್ನುವವರು ಬಿಜೆಪಿಗೆ ಬರಬೇಕು. ಅಧಿಕಾರ ಆಸ್ತಿ ಅಲ್ಲದೇ ದೇಶ ಮುಖ್ಯ ಎನ್ನುವವರಿಗೆ ಬಿಜೆಪಿ ಬಾಗಿಲು ತೆರೆದಿದೆ” ಎಂದರು.

ಕುರುಬರು ಹಿಂದೂಗಳಲ್ಲವೇ?

“ಕುರುಬರ ಹಾಸ್ಟೆಲ್ ಮೇಲೆ ಯಾರು ದಾಳಿ ಮಾಡಿಲ್ಲ. ಹಾಸ್ಟೆಲ್ ಮುಂದೆ ಇರೋ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದಿದ್ದಾರೆ. ಕಾಂಗ್ರೆಸ್ ಟೂಲ್ ಕಿಟ್ ರಾಜಕೀಯ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಕುರುಬರು ಹಿಂದೂಗಳಲ್ಲವೆ? ಅವರು ದೇಶ ಭಕ್ತರು. ಸಂಗೊಳ್ಳಿ ರಾಯಣ್ಣ ಯಾರು? ಕನಕದಾಸ ಸನಾತನ ಪರಂಪರೆ ಎತ್ತಿ ಹಿಡಿದಿದ್ದಾರೆ” ಎಂದು ತಿಳಿಸಿದರು.

ಮಾಗಡಿ ಶಾಸಕ ಬಾಲಕೃಷ್ಣ ವಿಚಾರವಾಗಿ ಮಾತನಾಡಿ, “2024 ರ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಅನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸದಿದ್ದರೆ ತಮ್ಮ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳನ್ನು ಹಿಂಪಡೆಯಲಿದೆ ಎಂದು ಕಾಂಗ್ರೆಸ್ ಶಾಸಕ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸುಳ್ಳುಗಾರ ಕಾಂಗ್ರೆಸ್‌ಗೆ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X