ಬಿಎಸ್ಸಿ ನರ್ಸಿಂಗ್ ಶಿಕ್ಷಣಕ್ಕೆ ಸಿಇಟಿ ಕಡ್ಡಾಯ

Date:

Advertisements
  • ಹೆಚ್ಚು ಪ್ರವೇಶ ಶುಲ್ಕ ವಸೂಲಿಗೆ ಕಡಿವಾಣ
  • ಕೆಇಎ’ಯಿಂದ ಏ.14 ರಿಂದ ಅರ್ಜಿ ಪ್ರಕ್ರಿಯೆ ಆರಂಭ

ಮುಂದಿನ ದಿನಗಳಲ್ಲಿ ನರ್ಸಿಂಗ್ ಶಿಕ್ಷಣ ಪಡೆಯಬೇಕೆಂದು ಇಚ್ಚಿಸುವವರು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯವಾಗಿ ಬರೆಯಲೇಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ

ಈ ಹಿಂದೆ ಬಿಎಸ್ಸಿ ಕೋರ್ಸ್‌ಗಳಿಗೆ ಯಾವುದೇ ಪ್ರವೇಶ ಪರೀಕ್ಷೆಯಿಲ್ಲದೆ ಕೆಇಎ ಮೂಲಕ ನರ್ಸಿಂಗ್ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಕೆಇಎ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿಯನ್ನು ಕರೆಯಲಾಗುತ್ತಿತ್ತು. ದ್ವಿತೀಯ ಪಿಯು ಅಂಕಗಳ ಆಧಾರದ ಮೇಲೆ ಸರ್ಕಾರಿ ಕೋಟಾದ ಶೇ.20ರಷ್ಟು ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್.ಎಸ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ವರ್ಷದಿಂದ ನರ್ಸಿಂಗ್ ಪದವಿ ಪಡೆಯಲು ಇಚ್ಛಿಸುವವರು ಸಿಇಟಿ ಎದುರಿಸಬೇಕಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆಯನ್ನು ಪ್ರಕಟಸಲಿದ್ದು, ಸಿಇಟಿ-2023ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 14 ರಿಂದ ಮೂರು ದಿನಗಳವರೆಗೆ ಅವಕಾಶ ನೀಡಲಿದೆ.

Advertisements

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಏ.25ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ?

ಸಿಇಟಿ ಪರೀಕ್ಷೆ ನಂತರ ಕೌನ್ಸೆಲಿಂಗ್ ಮತ್ತಿತ್ತರ ಕ್ರಮಗಳು ಇರುತ್ತದೆ. ಈ ವರ್ಷದಿಂದ ಕೋರ್ಸ್‌ಗೆ ಸರ್ಕಾರಿ ಮತ್ತು ಮ್ಯಾನೇಜ್‌ಮೆಂಟ್ ಕೋಟಾ ಎರಡು ಇವೆ. ಇದೇ ಮೊದಲ ಬಾರಿಗೆ ನರ್ಸಿಂಗ್‌ ಶಿಕ್ಷಣದಲ್ಲಿ ಇನ್ನಷ್ಟು ಗುಣಮಟ್ಟ ತರಲು ಕೆಸಿಇಟಿ ನಡೆಸಲು ನಿರ್ಧರಿಸಲಾಗಿದೆ.

ಮ್ಯಾನೆಜ್ ಮೆಂಟ್ ಸೀಟುಗಳಿಗಾಗಿ ವಿದ್ಯಾರ್ಥಿಗಳ ಬಳಿ ಶಿಕ್ಷಣ ಸಂಸ್ಥೆಗಳು ಹೆಚ್ಚು ಹಣ ವಸೂಲಿ ಮಾಡಿಕೊಳ್ಳುತ್ತವೆ. ಇವೆಲ್ಲದಕ್ಕೂ ಕಡಿವಾಣ ಹಾಕುವ ನಿಟ್ಟಿನಲ್ಲಿ, ಬಿಎಸ್ಸಿಗೆ ಸಿಇಟಿ ಕಡ್ಡಾಯ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 498 ನೋಂದಾಯಿತ ನರ್ಸಿಂಗ್ ಕಾಲೇಜುಗಳು ಸುಮಾರು 35,000 ಸೀಟುಗಳನ್ನು ನೀಡುತ್ತಿವೆ. ಈ ಹಿಂದೆ ಕೆಇಎ ಒಟ್ಟು 7,332 ಸರ್ಕಾರಿ ಕೋಟಾ ಸೀಟುಗಳನ್ನು ಭರ್ತಿ ಮಾಡಿತ್ತು. ಉಳಿದ ಸೀಟುಗಳನ್ನು ನರ್ಸಿಂಗ್ ಸಂಸ್ಥೆಗಳು ಮ್ಯಾನೇಜ್‌ಮೆಂಟ್ ಕೋಟಾ ಸೀಟುಗಳಾಗಿ ಭರ್ತಿ ಮಾಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X