ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಪತನ, ಇದು ನನ್ನ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Date:

Advertisements

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ನಾನು ಈ ಬಗ್ಗೆ ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ. ಸಿಎಂ ಸಿದ್ದರಾಮಯ್ಯ ರೈತರನ್ನು ಕಡೆಗಣನೆ ಮಾಡಿದ್ದಾರೆ” ಎಂದರು.

“ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತುಹೋಗಿದೆ. ಇನ್ನು 200 ಯೂನಿಟ್ ವಿದ್ಯುತ್ ಯಾರಿಗೆ ಫ್ರೀ ಕೊಟ್ಟಿದ್ದೀರಿ, ಒಬ್ಬರ ಹೆಸರು ಹೇಳಲಿ ಸಾಕು. ಗೃಹಲಕ್ಷ್ಮೀ ಯೋಜನೆ ಒಂದು ತಿಂಗಳು ಬಂದರೆ, ಇನ್ನೊಂದು ತಿಂಗಳು ಬರುವುದಿಲ್ಲ” ಎಂದು ಹರಿಹಾಯ್ದರು.

Advertisements

ಆರ್ಥಿಕವಾಗಿ ರಾಜ್ಯ ದಿವಾಳಿ: ಬಿ ಸಿ ಪಾಟೀಲ್

ಮಾಜಿ ಸಚಿವ ಬಿ ಸಿ ಪಾಟೀಲ್ ಮಾತನಾಡಿ, “ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗಾಳಿ ಬೀಸಿದೆ. ಕಳೆದ ಚುನಾವಣೆಯಲ್ಲಿ ಯಾವುದೋ ತಪ್ಪಿನಿಂದಾಗಿ ನಮಗೆ ಸೋಲಾಗಿದೆ. ಈ ಭಾರಿ ಹಾಗೇ ಆಗುವುದಿಲ್ಲ. ಈಗಾಗಲೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡಲು ವಿಫಲವಾಗಿದೆ. ರಾಜ್ಯದಲ್ಲಿ ಬರಗಾಲ ಇದ್ದು, ರೈತರಿಗೆ ಕರೆಂಟ್ ಕೊಡುತ್ತಿಲ್ಲ. ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಯಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸಂಪೂರ್ಣವಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಬಿಜೆಪಿ ಬರಲಿದೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಬಾಯಿತಗೆದರೆ ಸಾಕು,, ಹೊಡಿ ಬಡಿ ಮುರಿ ಹರಿ,, ಬೇರೆ ಯಾವ ತರಬೇತಿಯನ್ನು ಕೊಡಲಿಲ್ವಾ ನಿಮಗೆ,,
    ಚುನಾಯಿತ ಸರ್ಕಾರಗಳನ್ನು ಬೀಳಿಸುವುದನ್ನು ಒಂದು ಸಾಧನೆಯಾಗಿ ಬಹಿರಂಗವಾಗಿ ಹೇಳಿಕೊಂಡು ಓಡಾಡುವಿರಲ್ಲ,,ದೇಶದ ದುರಂತ

  2. ಲೋಕಸಭೆ ಚುನಾವಣೆ ನಂತರ ನೀವು ನಾಪತ್ತೆ ಆಗುವಿರಿ ಎಂದು ಜನಸಾಮಾನ್ಯರ ಗ್ಯಾರಂಟಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X