ಹೇಮಂತ್ ಸೊರೇನ್ ಬಂಧನ: ಪಿತೂರಿಯ ಅಬ್ಬರದ ಪ್ರದರ್ಶನ ಎಂದ ಎಂ ಕೆ ಸ್ಟಾಲಿನ್

Date:

Advertisements

ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜೆಎಂಎಂ ಮುಖ್ಯಸ್ಥರನ್ನು ಬೆದರಿಸುತ್ತಿರುವುದು ಹತಾಶೆಯನ್ನು ಮರುಕಳಿಸುವ ವರ್ತನೆ ಎಂದು ಎಂ ಕೆ ಸ್ಟಾಲಿನ್ ಹೇಳಿದರೆ, ಲೋಕಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಎಲ್ಲರನ್ನು ಜೈಲಿಗೆ ಕಳಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಮಂತ್ ಸೊರೇನ್ ಅವರನ್ನು ಬಂಧಿಸುವ ಮೂಲಕ ರಾಜಕೀಯ ಪಿತೂರಿಯ ಅಬ್ಬರದ ಪ್ರದರ್ಶನ ನಡೆಸುತ್ತಿದೆ. ತನಿಖಾ ಸಂಸ್ಥೆಗಳ ಮೂಲಕ ಬುಡಕಟ್ಟು ನಾಯಕನಿಗೆ ಕಿರುಕುಳ ನೀಡುತ್ತಿರುವುದು ಅತ್ಯಂತ ಕೆಳಮಟ್ಟದ್ದಾಗಿದೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಹತಾಶೆಯನ್ನು ಮರುಕಳಿಸುವ ವರ್ತನೆಯಾಗಿದೆ. ಬಿಜೆಪಿಯ ಕೆಟ್ಟ ತಂತ್ರಗಳು ವಿಪಕ್ಷಗಳ ಧನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಂ ಕೆ ಸ್ಟಾಲಿನ್ ಎಕ್ಸ್‌ನಲ್ಲಿ ಖಂಡಿಸಿದ್ದಾರೆ.

Advertisements

“ಬಿಜೆಪಿಯ ಪಿತೂರಿಯ ರಾಜಕಾರಣದ ಹೊರತಾಗಿಯೂ ಹೇಮಂತ್ ಸೊರೇನ್ ಗಟ್ಟಿಯಾಗಿ ನಿಂತುಕೊಳ್ಳಲಿದ್ದು, ಯಾವುದೇ ಕಾರಣಕ್ಕೂ ತಲೆಬಾಗುವುದಿಲ್ಲ. ಸಂಕಷ್ಟದ ನಡುವೆಯೂ ಅವರ ಸ್ಥೈರ್ಯ ಶ್ಲಾಘನೀಯ. ಬಿಜೆಪಿಯ ಬೆದರಿಕೆ ತಂತ್ರಗಳನ್ನು ಎದುರಿಸುತ್ತಿರುವ ಅವರ ಬದ್ಧತೆ ನಿಜಕ್ಕೂ ಸ್ಪೂರ್ತಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಹೇಮಂತ್ ಸೊರೇನ್ ಅವರ ಬಂಧನವನ್ನು ಉಗ್ರವಾಗಿ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯನ್ನು ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ಎಲ್ಲರನ್ನು ಜೈಲಿಗೆ ಕಳಿಸುತ್ತಿದೆ ಎಂದಿದ್ದಾರೆ.

ಎಎಪಿ ನಾಯಕ ಹಾಗೂ ದೆಹಲಿ ಸಚಿವ ಅತೀಶಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಮಂತ್ ಸೊರೇನ್ ಅವರ ಬಂಧಿಸುತ್ತಿರುವ ಕ್ರಮವು ಲೋಕಸಭಾ ಚುನಾವಣೆಗಳಿಗೂ ಮುನ್ನ ವಿಪಕ್ಷಗಳ ಮೇಲೆ ದಾಳಿ ನಡೆಸುವ ಒಂದು ಪ್ರಯತ್ನವಾಗಿದೆ. ಮುಂದಿನ ಒಂದು ತಿಂಗಳೊಳಗೆ ಹಲವು ವಿಪಕ್ಷ ನಾಯಕರು ಬಂಧನಕ್ಕೊಳಗಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇ.ಡಿ ಯಿಂದ ಬಂಧನಕ್ಕೊಳಗಾಗಿರುವ ಸೊರೇನ್ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೋರ್ಟ್ ಆದೇಶಿಸಿದೆ. ಬಂಧನ ಕ್ರಮ ಪ್ರಶ್ನಿಸಿ ಸೊರೇನ್ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X