ತುಮಕೂರು | ಫೆ.8ಕ್ಕೆ ಗುಬ್ಬಿ ತಾಲೂಕಿಗೆ ಸಂವಿಧಾನ ಜಾಗೃತಿ ಜಾಥಾ

Date:

Advertisements

ಸಂವಿಧಾನ ಕುರಿತು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಜೊತೆಗೆ ಸರ್ವರಿಗೂ ಸಂವಿಧಾನ ಪೀಠಿಕೆ ತಿಳಿಸುವ ʼಸಂವಿಧಾನ ಜಾಗೃತಿ ಜಾಥಾʼ ಇದೇ ತಿಂಗಳ (ಫೆ.) 8ರಂದು ಗುಬ್ಬಿ ತಾಲೂಕಿಗೆ ಬರಲಿದೆ. ಈ ಬಗ್ಗೆ ವಿವಿಧ ಸಂಘಟನೆಯ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು.

ಗುಬ್ಬಿ ಪಟ್ಟಣದಲ್ಲಿ ಭವ್ಯ ಸ್ವಾಗತ ಪಡೆಯಲಿರುವ ಈ ಜಾಥ ತಾಲೂಕಿನ 34 ಗ್ರಾಮ ಪಂಚಾಯಿತಿಗೆ ಪ್ರವಾಸ ಮಾಡಲಿದೆ. ಎಲ್ಲಡೆ ಕಾರ್ಯಕ್ರಮ ಆಯೋಜನೆ ಕುರಿತು ಮುಖಂಡರು, ಜನಪ್ರತಿನಿಧಿಗಳು ಹಾಗೂ ದಲಿತ ಸಂಘಟನೆಗಳ ಅಭಿಪ್ರಾಯ ಸಂಗ್ರಹಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿತ್ತು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐದು ದಿನದ ಪ್ರವಾಸದ ಸಂಪೂರ್ಣ ಯಶಸ್ವಿಗೆ ಎಲ್ಲಾ ಸ್ಥಳೀಯ ಮುಖಂಡರು ಹಾಗೂ ಸಂಘಟನೆಗಳ ಸಹಕಾರ ಬಗ್ಗೆ ತಹಸೀಲ್ದಾರ್ ಬಿ.ಆರತಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಎಲ್ಲರ ಸಲಹೆ ಸೂಚನೆ ಸಂಗ್ರಹಿಸಿದರು.

Advertisements

ಈ ತಿಂಗಳ 8ರಂದು ಕುಣಿಗಲ್ ತಾಲೂಕಿನ ಮೂಲಕ ಗುಬ್ಬಿ ಪಟ್ಟಣಕ್ಕೆ ಆಗಮಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ ಭವ್ಯ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಲಾಗಿದೆ. ಎಲ್ಲಾ ಮುಖಂಡರು ಈ ಕಾರ್ಯಕ್ರಮವನ್ನು ಸೇರಿ ನಡೆಸಲು ನಿರ್ಧರಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಜಾಥಾಕ್ಕೆ ಚಾಲನೆ ನೀಡಲಿದ್ದು ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ ಎಂದು ತಾ.ಪಂ ಇಒ ಪರಮೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಫೆ.8 ರಂದು ಗುಬ್ಬಿ ಪಟ್ಟಣದಲ್ಲಿ ಸ್ವಾಗತ ಕಾರ್ಯಕ್ರಮ ನಂತರದಲ್ಲಿ ಜಿ.ಹೊಸಹಳ್ಳಿ, ಕುನ್ನಾಲ, ಎಸ್.ಕೊಡಗೀಹಳ್ಳಿ, ಚಂಗಾವಿ, ಮಾವಿನಹಳ್ಳಿ ಹಾಗೂ ಇಡಗೂರು ತಲುಪಲಿದೆ. ಫೆ.9 ರಂದು ಸಿ.ಎಸ್.ಪುರ, ಹಿಂಡಿಸ್ಕೆರೆ, ಕಲ್ಲೂರು, ಪೆದ್ದನಹಳ್ಳಿ, ಕಡಬ, ಬ್ಯಾಡಿಗೆರೆ, ಕೊಪ್ಪ ಹಾಗೂ ಅಡಗೂರು ಗ್ರಾಪಂ ತಲುಪಲಿದೆ. ಫೆ.10ರಂದು ಎಂ.ಎಚ್.ಪಟ್ಟಣ, ಇರಕಸಂದ್ರ, ಬಿದರೆ, ಅಮ್ಮನಘಟ್ಟ, ಹೇರೂರು, ಬೆಲವತ್ತ ಹಾಗೂ ನಿಟ್ಟೂರು ಮುಟ್ಟಲಿದೆ ಎಂದು ತಿಳಿಸಿದರು.

ಫೆ.11ರಂದು ಮಾರಶೆಟ್ಟಿಹಳ್ಳಿ, ದೊಡ್ಡಗುಣಿ, ಕೊಂಡ್ಲಿ, ತ್ಯಾಗಟೂರು, ಎಂ.ಎನ್.ಕೋಟೆ, ಅಳಿಲುಘಟ್ಟ, ಹೊಸಕೆರೆ ಹಾಗೂ ಶಿವಪುರ ಜಾಥಾ ಉಳಿಯಲಿದೆ.

ಕೊನೇ ದಿನ  ಫೆ.12ರಂದು ಹಾಗಲವಾಡಿ, ಮಂಚಲದೊರೆ, ಅಂಕಸಂದ್ರ, ನಲ್ಲೂರು ಚೇಳೂರು ಗ್ರಾಪಂನಲ್ಲಿ ಜಾಥಾ ಸಮರೊಳಗೊಳ್ಳಲಿದೆ ನಂತರ ತುರುವೇಕೆರೆ ತಾಲ್ಲೂಕಿನತ್ತ ಜಾಥಾ ಹೊರಡಲಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ ಹಾಗೂ ಎಲ್ಲಾ ದಲಿತ ಮುಖಂಡರು ಹಾಜರಿದ್ಧರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X