ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

Date:

Advertisements
ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

ಸಾಮಾಜಿಕ ಕಾರ್ಯಕರ್ತ ಮತ್ತು ಈಕ್ವಿಟಿ ಸ್ಟಡೀಸ್ ಚಿಂತನ ಕೇಂದ್ರದ ನಿರ್ದೇಶಕ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡಸಿದೆ. ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆ ಮತ್ತು ಅದರ ನಿರ್ದೇಶಕರಾದ ಹರ್ಷ ಮಂದರ್ ಮೇಲೆ ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ)  ನಿಯಮಗಳ ಉಲ್ಲಂಘನೆ ಆರೋಪ ಹೊರಿಸಲಾಗಿದೆ. 

ದಾಳಿಯ ಸಂದರ್ಭದಲ್ಲಿ ಪ್ರಾಥಮಿಕ ತನಿಖೆಯ ಅಂಗವಾಗಿ ಸಿಬಿಐ ಕಚೇರಿಯ ಸಿಬ್ಬಂದಿ ಸೇರಿದಂತೆ ಹಲವರನ್ನು ಪ್ರಶ್ನಿಸಿದೆ. ದೆಹಲಿಯ ಅದ್ಚಿನಿ ಪ್ರದೇಶದಲ್ಲಿರುವ ಅಧ್ಯಯನ ಕೇಂದ್ರ ಮತ್ತು ವಸಂತ್ ಕುಂಜ್ ಪ್ರದೇಶದಲ್ಲಿರುವ ಹರ್ಷ ಮಂದರ್ ಮನೆ ಮೇಲೆ ದಾಳಿ ನಡೆಸಲಾಗಿದೆ.

ಕಳೆದ ಜೂನ್‌ನಲ್ಲಿ ಕೇಂದ್ರ ಗೃಹ ಸಚಿವಾಲಯ ಚಿಂತನ ಕೇಂದ್ರದ ವಿದೇಶಿ ಅನುದಾನ (ನಿಯಂತ್ರಣ)  ಕಾಯ್ದೆಯ ಪರವಾನಗಿಯನ್ನು 180 ದಿನಗಳವರೆಗೆ ರದ್ದುಪಡಿಸಿತ್ತು. ಮಂದರ್ ನಿಯಮಿತವಾಗಿ ಅನೇಕ ದಿನಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು ಎಂದು ಆಗ ಸಚಿವಾಲಯ ತಿಳಿಸಿತ್ತು.

Advertisements

2011-12ರಿಂದ 2017-18ರ ನಡುವೆ ವೃತ್ತಿಪರ ರಶೀದಿ/ ಪಾವತಿಯಲ್ಲಿ ಮಂದರ್  ರೂ 12,64,671 ವಿದೇಶಿ ಅನುದಾನವನ್ನು ಸಂಸ್ಥೆಯ  ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ ಖಾತೆಗೆ ಸ್ವೀಕರಿಸಿದ್ದಾರೆ. ಇದು (ಎಫ್‌ಸಿಆರ್‌ಎ) ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ ನಿಯಮದ ಉಲ್ಲಂಘನೆ ಎಂದು ಗೃಹ ಸಚಿವಾಲಯ ಆರೋಪಿಸಿದೆ.

ಹರ್ಷ ಮಂದರ್ ನಿವೃತ್ತ ಐಎಎಸ್ ಅಧಿಕಾರಿ ಎನ್ನುವುದನ್ನೂ ನೆನಪಿಟ್ಟುಕೊಳ್ಳಬೇಕಿದೆ. ಕಳೆದ ವರ್ಷ ಮಂದರ್‌ ಸ್ಥಾಪಿಸಿದ್ದ ಸರ್ಕಾರೇತರ ಸಂಘಟನೆ ಅಮನ್ ಬಿರಾದರಿ ಟ್ರಸ್ಟ್‌ಗೆ ವಿದೇಶಿ ಅನುದಾನದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X