ವಿಜಯಪುರ | ಅತ್ಯಂತ ನಿರಾಶಾದಾಯಕ ಹಾಗೂ ಅಸಮತೋಲಿತ ಬಜೆಟ್: ಕಾಂಗ್ರೆಸ್‌ ಮುಖಂಡ

Date:

Advertisements

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಬಡವರು, ದೀನದಲಿತ, ರೈತರು, ಜನಸಾಮಾನ್ಯರಿಗೆ ಬಜೆಟ್‌ ವಿರುದ್ಧವಾಗಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತಯಾರಿಸಿದ ಬಜೆಟ್ ಇದು ಎಂದು ಕೆಪಿಸಿಸಿ ವೈದ್ಯರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರವಿಕುಮಾರ ಬಿರಾದಾರ ಹೇಳಿದ್ದಾರೆ.

ಕೇಂದ್ರ ಬಜೆಟ್‌ಗೆ ಪ್ರತಿಕ್ರಿಯಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರವು ಅವರು, “ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ನೀರಾವರಿ ಯೋಜನೆಗಳಾಗಲಿ, ಇನ್ನಿತರ ಯೋಜನೆಗಳನ್ನಾಗಲಿ ನೀಡಿಲ್ಲ. ರೈತರ ಗೊಬ್ಬರ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಗೊಬ್ಬರ ಬೆಲೆ ಏರಿಕೆ ಮಾಡಿ ರೈತನ ಬೆನ್ನೆಲುಬು ಮುರಿದಿದ್ದಾರೆ. ಬಂಡವಾಳ ಶಾಹಿಗಳ ತೆರಿಗೆ ಕಡಿಮೆ ಮಾಡಿ ಬಡ ಜನರ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ ಅಲ್ಲದೇ ಆದಾಯ ತೆರಿಗೆಯಲ್ಲೂ ಯಾವುದೇ ಬದಲಾವಣೆ ಮಾಡದೇ ಇರುವದು ನೌಕರರಿಗೆ ನಿರಾಸೆ ಮೂಡಿಸಿದೆ” ಎಂದು ಹೇಳಿದ್ದಾರೆ.

“ಎಲ್ಲ ಯೋಜನೆಗಳನ್ನು ಉತ್ತರ ಭಾರತದವರಿಗೆ ನೀಡಿ, ಅತೀ ಹೆಚ್ಚು ತೆರಿಗೆ ನೀಡುವ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಗಗನಕ್ಕೇರಿರುವ ಪೆಟ್ರೋಲ್, ಡೀಸೆಲ್ ಹಾಗೂ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆ ಇಳಿಕೆ ಮಾಡುವತ್ತ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ” ಎಂದು ಕಿರಿಕಾರಿದ್ದಾರೆ.

Advertisements

“ದೇಶದ ಸಾಲವನ್ನು 18 ಲಕ್ಷ ಹೆಚ್ಚುವರಿ ಮಾಡಿ,2014 ರಲ್ಲಿ 54 ಲಕ್ಷ ಕೊಟ್ಟಿಯಿದ್ದ ಸಾಲವನ್ನು ಸುಮಾರು 163 ಲಕ್ಷ ಕೋಟಿಗೆ ಏರಿಸಿದ್ದಾರೆ. ಮೋದಿ ತಮ್ಮ ಅಧಿಕಾರಾವಾಧಿಯ 9 ವರ್ಷಗಳಲ್ಲಿ ಸುಮಾರು 118ಲಕ್ಷ ಕೋಟಿ ಹೆಚ್ಚುವರಿವಿಪರೀತ ಸಾಲ ಮಾಡಿದ್ದಾರೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X