ಶಿವಮೊಗ್ಗ | ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ನಡುವೆ ಗಲಾಟೆ; ಪ್ರಯಾಣಿಕರು ಹೈರಾಣ

Date:

Advertisements

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟ್‌ಗಳ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ನಿಗದಿತ ಸಮಯಕ್ಕೆ ಮುಂಚೆಯೇ ಖಾಸಗಿ ಬಸ್‌ಗಳು ಬಸ್‌ ನಿಲ್ದಾಣಕ್ಕೆ ಬರುತ್ತಿವೆ. ಜೊತೆಗೆ, ಲಗೇಜ್‌ ವಾಹನಗಳೂ ಅತಿಕ್ರಮವಾಗಿ ಬಸ್‌ ನಿಲ್ದಾಣಕ್ಕೆ ಪ್ರವೇಶಿಸುತ್ತಿವೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.

ಸುಮಾರು 2 ಗಂಟೆಗಳ ಕಾಲ ಗಲಾಟೆ ನಡೆದಿದ್ದು, ಆ ವೇಳೆಯಲ್ಲಿ ಯಾವುದೇ ಬಸ್‌ಗಳು ನಿಲ್ದಾಣಕ್ಕೆ ಬಾರದಂತೆ ಮತ್ತು ಹೊರಹೋಗದಂತೆ ತಡೆಯಲಾಗಿತ್ತು. ಹೀಗಾಗಿ, ಪ್ರಯಾಣಿಕರು ತಮ್ಮೂರುಗಳಿಗೆ ಹೋಗಲಾಗದೆ, ಮಾಲೀಕರು-ಏಜೆಂಟ್‌ಗಳ ಜಗಳದಿಂದ ಬೇಸತ್ತು ಅಸಹಾಯಕರಾಗಿದ್ದಾರೆ. ಸಮಸ್ಯೆಗಳನ್ನು ಪೊಲೀಸರ ಮುಖಾಂತರ ಬಗೆಹರಿಸಿಕೊಳ್ಳಿ, ಪ್ರಯಾಣಿಕರಿಗೆ ತೊಂದರೆ ಕೊಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಲಾಟೆ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಖಾಸಗಿ ಬಸ್‌ ಮಾಲೀಕರು, “ಬಸ್ ನಿಲ್ದಾಣದ ಒಳಗೆ ನಿಗದಿತ ಸಮಯಕ್ಕೆ ಮುಂಚೆನೆ ಬಸ್‌ಗಳನ್ನು ತಂದು ನಿಲ್ಲಿಸಲಾಗುತ್ತಿದೆ. ಇದರಿಂದ, ಬಹಳಷ್ಟು ಬಾರಿ ಸಮಸ್ಯೆ ಉಂಟಾಗುತ್ತದೆ. ಸಮಸ್ಯೆ ಬಗೆಹರಿಯುವವರೆಗೂ ಬಸ್‌ಗಳನ್ನು ಆಚೆ ಬಿಡುವುದಿಲ್ಲ, ನಿಲ್ದಾಣ ಒಳಗೆ ಬಸ್‌ಗಳು ಬರುವುದಕ್ಕೂ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಘಟನೆಯ ಬಗ್ಗೆ ಈದಿನ.ಕಾಮ್ ಪ್ರತಿನಿಧಿ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್‌ ಪೇದೆ ಮುನೇಶಪ್ಪ ಅವರು ಕೂಡಲೇ ಸ್ಥಳಕ್ಕೆ ಬಂದು, ಮಾಲೀಕರು ಮತ್ತು ಏಜೆಂಟರನ್ನು ಸಮಾಧಾನಿಸಲು ಯತ್ನಿಸಿದರು. ಆದರೂ, ಗಲಾಟೆ ಮುಂದುವರೆದಿತ್ತು.

ಬಳಿಕ, ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಪಿಎಸ್‌ಐ ತಿರುಮಲೇಶ್ ಅವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆ ವೇಳೆ, ಪೊಲೀಸರೊಂದಿಗೆ ಬಸ್‌ ಮಾಲೀಕರು ವಾಗ್ವಾದ ನಡೆಸಿದ್ದಾರೆ. ನಿಗದಿತ ಸಮಯಕ್ಕೆ ಮುಂಚೆ ಬರುವ ಬಸ್‌ಗಳ ಮೇಲೆ ಕ್ರಮ ಜರುಗಿಸಬೇಕು. ಅನಧಿಕೃತವಾಗಿ ಬರುವ ಖಾಸಗಿ ಬಸ್ ಸೇರಿದಂತೆ ಲಗೇಜ್ ವಾಹನಗಳಮೇಲೆ ಪ್ರಕರಣ ದಾಖಲಿಸಬೇಕು ಎಂದು ಒತ್ಥಾಯಿಸಿದ್ದಾರೆ. ಠಾಣೆಗೆ ಬಂದು ದೂರು ನೀಡಿ ಎಂದು ಪಿಎಸ್‌ಐ ತಿಳಿಸಿದ್ದು, ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಗಲಾಟೆ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್, “ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರು ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಎಚ್ಚರ ವಹಿಸುತ್ತೇವೆ. ಅನಧಿಕೃತ ವಾಹನಗಳು ಬಸ್ ಸ್ಟಾಂಡ್ ಒಳಗೆ ಬಂದರೆ ಕ್ರಮ ಜರುಗಿಸಿ ಫೈನ್ ಹಾಕುತ್ತೇವೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X