ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ: ಡಿ.ಕೆ. ಶಿವಕುಮಾರ್

Date:

Advertisements

“ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,”ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸಲು ವಿಫಲವಾದ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ. ಮೊದಲು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ. ಇದೇ ಕಾರಣಕ್ಕೆ ರಾಜ್ಯದ ಜನ ಅವರನ್ನು ಧಿಕ್ಕರಿಸಿದ್ದಾರೆ” ಎಂದು ತಿಳಿಸಿದರು.

“ಬರಗಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡದಿರುವುದು, ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಮಾಡದಿರುವುದರ ವಿರುದ್ಧ ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಸಚಿವರು, ಶಾಸಕರು, ಸಂಸದರು ಇದೇ ಮೊದಲ ಬಾರಿಗೆ ಇಂತಹ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

Advertisements

ಸಿಎಂ ಸಿದ್ದರಾಮಯ್ಯ ಅವರು ಕುಂಕುಮ ತಿರಸ್ಕಾರ ಮಾಡಿದ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದಾಗ, “ನನಗೆ ಸುಗಂಧ ರಾಜ ಹೂವು ಅಲರ್ಜಿ ಇದೆ. ಅದೇ ರೀತಿ ಬೇರೆಯವರಿಗೆ ಬೇರೆ, ಬೇರೆ ರೀತಿಯ ಅಲರ್ಜಿ ಇರುತ್ತದೆ. ಸಿದ್ದರಾಮಯ್ಯ ಕುಂಕುಮ ಇಟ್ಟುಕೊಳ್ಳುವುದಿಲ್ಲ ಎಂದು ಯಾರು ಹೇಳಿದರು? ಮೊನ್ನೆಯಷ್ಟೇ ಅವರು ಕುಂಕುಮ ಇಟ್ಟುಕೊಂಡಿದ್ದರು. ಮಹಿಳೆಯರಂತೆ ಅಗಲವಾಗಿ ಕುಂಕುಮ ಇಟ್ಟುಕೊಳ್ಳಲು ಆಗುತ್ತದೆಯೇ” ಎಂದು ಪ್ರಶ್ನಿಸಿದರು.

ಜಾತಿ ಕಾರಣಕ್ಕೆ ಸ್ವಾಮೀಜಿಗಳಿಗೆ ಗರ್ಭಗುಡಿಗೆ ಪ್ರವೇಶ ನಿರಾಕರಣೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಸಾಮಾನ್ಯವಾಗಿ ದೇವಾಲಯಗಳನ್ನು ಬೆಳಗ್ಗೆ ಮತ್ತು ಸಂಜೆ ವೇಳೆ ಸ್ವಚ್ಛ ಮಾಡುವುದು ಸಹಜ. ಈ ಪ್ರಕರಣದಲ್ಲಿ ಏನು ಉದ್ದೇಶ ಇದೆ ಎಂದು ಜಿಲ್ಲಾ ಸಚಿವರು, ಮುಜರಾಯಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ನಮ್ಮಲ್ಲಿ ಇಂತಹ ಅಸ್ಪೃಶ್ಯತೆ ಇಲ್ಲ. ನಾವೆಲ್ಲರೂ ಒಂದೇ. ಮಾನವೀಯತೆಯಿಂದ ಎಲ್ಲರೂ ಒಟ್ಟಾಗಿ ಬದುಕಬೇಕು. ಎಲ್ಲ ಧರ್ಮದವರಿಗೂ ದೇವಾಲಯಗಳಲ್ಲಿ ಅವಕಾಶ ನೀಡುತ್ತೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಗರ್ಭಕಂಠ ಕ್ಯಾನ್ಸರ್‌ ಜಾಗೃತಿಗಾಗಿ ತನ್ನದೇ ಸಾವಿನ ಸುದ್ದಿ ಹರಡಿದ ನಟಿ ಪೂನಂ ಪಾಂಡೆ!

ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಡೀ ಭಾರತ ಒಂದು. ಕಾಂಗ್ರೆಸ್ ಪಕ್ಷ ಭಾರತವನ್ನು ಸದಾ ಒಗ್ಗಟ್ಟಾಗಿ ಇಟ್ಟಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನಮ್ಮ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಸುರೇಶ್ ಅವರು ಕೂಡ ದೇಶವನ್ನು ಒಗ್ಗಟ್ಟಾಗಿ ಇಡಬೇಕು, ಸಮಾನತೆಯಿಂದ ದೇಶದ ಸಂಪತ್ತು ಹಂಚಬೇಕು ಎಂದು ಧ್ವನಿ ಎತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X