ಕೃತಿ ಚೌರ್ಯ ಪ್ರಕರಣ | ʼವರಾಹ ರೂಪಂʼ ಹಾಡಿನ ಪ್ರಸಾರಕ್ಕೆ ಮತ್ತೆ ತಡೆ

Date:

Advertisements

ʼವರಾಹ ರೂಪಂʼ ಹಾಡಿನ ಪ್ರಸಾರಕ್ಕೆ ತಡೆ ನೀಡಿದ ಕೋಝಿಕ್ಕೋಡ್‌ ಜಿಲ್ಲಾ ನ್ಯಾಯಾಲಯ

ʼನವಸರಂʼ ಹಾಡಿನ ಟ್ಯೂನ್‌ ಕದ್ದ ಆರೋಪ ಎದುರಿಸುತ್ತಿರುವ ʼಕಾಂತಾರʼ ಚಿತ್ರತಂಡ

‘ಕಾಂತಾರ’ ಚಿತ್ರದ ʼವರಾಹ ರೂಪಂʼ ಹಾಡಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮಲಯಾಳಂನ ಜನಪ್ರಿಯ ʼನವರಸಂʼ ಹಾಡಿನ ಟ್ಯೂನ್‌ ಕದ್ದು ‘ವರಾಹ ರೂಪಂ’ ಹಾಡನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ವಿವಾದಕ್ಕೆ ಸಂಬಂಧಿಸಿ ಪ್ರಕರಣದ ವಿಚಾರಣೆ ನಡೆಸಿರುವ ಕೇರಳದ ಕೋಝಿಕ್ಕೋಡ್‌ ಜಿಲ್ಲಾ ನ್ಯಾಯಾಲಯ ಹಾಡಿನ ಪ್ರಸಾರಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

Advertisements

ಗುರುವಾರ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಧೀಶ ಕೆ.ಇ ಸಾಹಿಲ್‌, ” ʼನವರಸಂʼ ಹಾಡಿನ ಸ್ಫೂರ್ತಿಯಿಂದಲೇ ʼವರಾಹ ರೂಪಂʼ ಹಾಡನ್ನು ಸೃಷ್ಟಿಸಿರುವುದಾಗಿ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಹಾಡಿನ ಮೂಲ ಹಕ್ಕನ್ನು ಹೊಂದಿರುವ ʼಮಾತೃಭೂಮಿ ಪಬ್ಲಿಕೇಶನ್‌ʼ ಮತ್ತು ಹಾಡಿನ ಸೃಷ್ಟಿಕರ್ತರಾದ ʼಥೈಕ್ಕುಡಂ ಬ್ರಿಡ್ಜ್‌ʼ ತಂಡಕ್ಕೆ ಕೃಪೆಯನ್ನು ನೀಡಬೇಕು. ವಿವಾದ ಇತ್ಯರ್ಥವಾಗುವ ವರೆಗೆ ಚಿತ್ರಮಂದಿರ ಮತ್ತು ಡಿಜಿಟಲ್‌ ವೇದಿಕೆಗಳಲ್ಲಿ ವಿವಾದಿತ ಹಾಡನ್ನು ಪ್ರಸಾರ ಮಾಡಬಾರದು” ಎಂದು ಮಧ್ಯಂತರ ಆದೇಶ ನೀಡಿದ್ದಾರೆ.

ʼಕಾಂತಾರʼ ಸಿನಿಮಾ ಬಿಡುಗಡೆಯಾದ ಕೆಲವೇ ದಿನಕ್ಕೆ ʼವರಾಹ ರೂಪಂʼ ಹಾಡು ʼನವರಸಂʼ ಆಲ್ಬಂನಂತಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಾದ ಬೆನ್ನಲ್ಲೇ ʼಥೈಕ್ಕುಡಂ ಬ್ರಿಡ್ಜ್‌ʼ ತಂಡ ಮತ್ತು ʼಮಾತೃಭೂಮಿ ಪಬ್ಲಿಕೇಶನ್‌ʼ, ʼಕಾಂತಾರʼ ಚಿತ್ರದ ನಿರ್ದೇಶಕ, ನಾಯಕ ನಟ ರಿಷಬ್‌ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್‌ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರು ಅವರುಗಳ ವಿರುದ್ಧ ಕೋಝಿಕ್ಕೋಡ್‌ ಮತ್ತು ಪಾಲಕ್ಕಾಡ್‌ ಪೊಲೀಸ್‌ ಠಾಣೆಗಳಲ್ಲಿ ಕೃತಿ ಚೌರ್ಯ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್‌ ಕೂಡ ವಿವಾದಿತ ʼವರಾಹ ರೂಪಂʼ ಹಾಡು ʼನವರಸಂʼ ಆಲ್ಬಂನ ನಕಲು ಎಂದು ಅಭಿಪ್ರಾಯ ಪಟ್ಟಿತ್ತು.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ಮಂದಿಗಿಂತ ದಕ್ಷಿಣದ ಕಲಾವಿದರಿಗೇ ವೃತ್ತಿಪರತೆ ಹೆಚ್ಚೆಂದ ಅಮೋಲ್‌ ಪಾಲೇಕರ್‌

ಆದರೆ, ಅಜನೀಶ್‌ ಲೋಕನಾಥ್‌, ರಿಷಬ್‌ ಶೆಟ್ಟಿ ಮತ್ತು ಚಿತ್ರತಂಡ ತಾವು ʼನವಸರಂʼ ಹಾಡಿನ ಟ್ಯೂನ್‌ ಕದ್ದಿಲ್ಲ. ಆ ಹಾಡಿನಿಂದ ಸ್ಫೂರ್ತಿ ಪಡೆದು ʼವರಾಹ ರೂಪಂʼ ಹಾಡನ್ನು ರಚಿಸಿದ್ದೇವೆ. ಯಾವುದೇ ಕಾರಣಕ್ಕೂ ಥೈಕ್ಕುಡಂ ಬ್ರಿಡ್ಜ್‌ ತಂಡಕ್ಕೆ ಕೃಪೆ ನೀಡುವುದಿಲ್ಲ ಎಂದಿತ್ತು. ಕೆಲ ದಿನಗಳ ಹಿಂದೆ ಪ್ರಕರಣದ ವಿಚಾರವಾಗಿ ಈದಿನ.ಕಾಮ್‌ ಜೊತೆಗೆ ಮಾತನಾಡಿದ್ದ ʼಥೈಕ್ಕುಡಂ ಬ್ರಿಡ್ಜ್‌ʼ ತಂಡದ ವ್ಯವಸ್ಥಾಪಕ ಸುಜಿತ್‌, ನ್ಯಾಯ ಸಿಗುವ ವರೆಗೆ ಕಾನೂನು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X