ಬೆಂಗಳೂರು | ಮತ್ತೊಂದು ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬರುವುದು ಮುಂದುವರೆದಿದೆ. ಇದೀಗ ಮತ್ತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ.

ನಗರದ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಯ ಒಳಗೆ ಬಾಂಬ್ ಇಟ್ಟಿದ್ದೇವೆ. ಬೆಳಗ್ಗೆ 10.20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಇ-ಮೇಲ್‌ನಲ್ಲಿ ಬೆದರಿಕೆ ಸಂದೇಶ ಕಳಿಸಿದ್ದಾರೆ.

Advertisements

ಶಾಲಾ ಆಡಳಿತ ಮಂಡಳಿ ಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ.

ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು

2023ರ ಡಿಸೆಂಬರ್​ನಲ್ಲಿ ಇದೇ ರೀತಿ ಬೆಂಗಳೂರಿನ 60 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶವನ್ನು ಕೆಲ ಕಿಡಿಗೇಡಿಗಳು ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು; ಚಾಲಕನ ಬಂಧನ

ಇ ಮೇಲ್‌ನಲ್ಲಿ ಶಾಲಾ ಕ್ರೀಡಾಂಗಣ, ಆವರಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬರೆಯಲಾಗಿತ್ತು. ಇದು ಭಾರೀ ಸುದ್ದಿ ಮಾಡಿತ್ತು. ಇದೀಗ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆಯೊಡ್ಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X