ಬೆಳಗಾವಿ | ಸಂವಿಧಾನ ಜಾಗೃತಿ ಜಾಥಾ; ಐಕ್ಯತಾ ಸಮಾವೇಶ

Date:

Advertisements

ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,‌ ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಮತ್ತು ಸ್ತಬ್ಧಚಿತ್ರ ಮೆರವಣಿಗೆ ಹಾಗೂ ಐಕ್ಯತಾ ಸಮಾವೇಶವನ್ನು ಜನವರಿ 26ರಿಂದ ಫೆಬ್ರವರಿ 25ರವರೆಗೆ ಹಮ್ಮಿಕೊಂಡಿದೆ.

ಜನರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ಉದ್ಧೇಶದಿಂದ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಪ್ರಾರಂಭಿಸಿದ್ದು, ಆದರ್ಶ ಸಮಾಜದ ಲಕ್ಷಣಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತ್ರ, ಸಮುದಾಯದ ಪ್ರಗತಿಯನ್ನು ಮಹಿಳೆಯರು ಸಾಧಿಸಿದ ಪ್ರಗತಿಯಿಂದ ಅಳೆಯಲಾಗುತ್ತದೆ. ನಾವು ಮೊದಲನೆಯದಾಗಿ ಕೊನೆಯದಾಗಿ ಭಾರತೀಯರೇ ಆಗಿದ್ದೇವೆಂಬ ಅಂಬೇಡ್ಕರ್‌ ಅವರ ಸಂದೇಶಗಳನ್ನು ಜನರಿಗೆ ಮುಟ್ಟಿಸುವುದು ಸಂವಿಧಾನ ಜಾಗೃತಿ ಜಾಥಾದ ಉದ್ಧೇಶವಾಗಿದೆ.

ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮಕ್ಕೆ ಭಾನುವಾರ ಸಂವಿಧಾನ ಜಾಗೃತಿ ಜಾಥಾ ಬಂದಿದ್ದು, ಊರಿನ ಗ್ರಾಮಸ್ಥರು, ಮಹಿಳೆಯರು ಮತ್ತು ಶಾಲಾ ವಿದ್ಯಾರ್ಥಿಗಳು ಸಂವಿಧಾನ ಜಾಗೃತಿ ಜಾಥಾ ಮತ್ತು ಅಂಬೇಡ್ಕರ್‌ ಅವರ ಸ್ತಬ್ಧ ಚಿತ್ರವನ್ನು ಬರಮಾಡಿಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ವೈದ್ಯರ ನಿರ್ಲಕ್ಷ್ಯ ಆರೋಪ: ಅವಳಿ ಮಕ್ಕಳು, ಬಾಣಂತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಶಾಲಾ ವಿದ್ಯಾರ್ಥಿಗಳು ಉತ್ತರ ಕರ್ನಾಟಕದ ಪ್ರಮುಖ ಜಾನಪದ ಕಲೆಯಾದ ಡೊಳ್ಳು ಕುಣಿತ ಹಾಗೂ ಕೋಲಾಟ ನೃತ್ಯದ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಗ್ರಾಮದ ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯರು ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಹಿರಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X