ರಾಯಚೂರು | ಕುಡಿಯುವ ನೀರಿನ ಕೊರತೆ ನೀಗಿಸಲು ಕ್ರಮ: ಪೌರಾಡಳಿತ ಸಚಿವ

Date:

Advertisements

ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಶೀಘ್ರದಲ್ಲಿ ಪೌರಾಡಳಿತ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ ಎಲ್ಲ ಅಧಿಕಾರಿಗಳ ಸಭೆ ಆಯೋಜನೆ ಮಾಡುತ್ತೇವೆ ಎಂದು ಪೌರಾಡಳಿತ ಸಚಿವ ರಹೀಂಖಾನ್ ಹೇಳಿದ್ದಾರೆ.

ರಾಯಚೂರಿನಲ್ಲಿ ನಗರ ಸ್ಥಳೀಯ ಸಂಸ್ಥೆಗಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲೆ ಯಾವುದೇ ನಗರ, ಪಟ್ಟಣಗಳಲ್ಲಿ ನಿತ್ಯವೂ ನೀರು ಪೂರೈಕೆ ಮಾಡುತ್ತಿಲ್ಲ. ಲಭ್ಯವಿರುವ ನೀರಿನ ಆಧಾರದ ಮೇಲೆ ಬೇಸಿಗೆ ದಿನಗಳು ಗಂಭೀರವಾಗುವ ಮುನ್ಸೂಚನೆಗಳಿದ್ದು ಎಲ್ಲ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು” ಎಂದು ಸೂಚಿಸಿದರು.

“ಹಟ್ಟಿ ಪಟ್ಟಣ ಪಂಚಾಯ್ತಿಯಿಂದ ಜಲ ಜೀವನ ಮಿಷನ್ ಕಾಮಗಾರಿ ವ್ಯಾಪ್ತಿಗೆ ಒಳಪಟ್ಟಿದ್ದು, ಬಹುಗ್ರಾಮ ಯೋಜನೆಯಡಿ ಯೋಜನೆ ರೂಪಿಸಲಾಗಿದೆ. ಆದರೂ ನೀರು ಪೂರೈಕೆ ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆಯಾತ್ಮಕ ವಾರ್ಡಗಳಿಗೆ ಟ್ಯಾಂಕರ್ ಮೂಲಕ ನೀರುಪೂರೈಸುವಂತೆ ಸೂಚಸಿದರು. ಕವಿತಾಳ ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ನೀರು ಹರಿಸಲಾಗುತ್ತಿದೆ. ೧೬ ವಾರ್ಡಗಳಿಗೆ ೨ ತಿಂಗಳಿಗೆ ಆಗುವಷ್ಟು ನೀರು ಸಂಗ್ರಹವಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿದರು. ಲಿಂಗಸೂಗೂರು ಪುರಸಭೆಯಲ್ಲ ಎನ್‌ಆರ್‌ಬಿಸಿ ನೀರಿನ ಮೇಲೆ ಅವಲಂಬಿತವಾಗಿದೆ ೨ ತಿಂಗಳಿಗೆ ಆಗುವಷ್ಟು ನೀರು ಸಂಗ್ರಹವಿದ್ದು, ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಮಾನವಿ ಪುರಸಭೆಯಿಂದ ೩ ದಿನಕೊಮ್ಮೆ ನೀರು ಸರಬರಾಜುಮಾಡಲಾಗುತ್ತಿದೆ” ಎಂದರು.

Advertisements

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಮಾತನಾಡಿ, “ಕಳೆದ ಏಳು ವರ್ಷಗಳಿಂದ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿದೆ. 85 ಕೋಟಿ ರೂ. ವೆಚ್ಚ ಮಾಡಲಾಗಿದ್ದರೂ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿ ಕಾಮಗಾರಿ ಅಪೂರ್ಣವಾಗಿ ಉಳಿಸಿದೆ” ಎಂದ ಬೇಸರ ವ್ಯಕ್ತಪಡಿಸಿದರು.

“ಕಾಮಗಾರಿ ನಿರ್ಲಕ್ಷ್ಯಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಪೌರಾಡಳಿತ ಸಚಿವರು ಸೂಚಿಸಿದರು.

“ರಾಯಚೂರು ನಗರಸಭೆಯಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. 340 ಬೊರವೆಲ್‌ಗಳಿದ್ದು ದುರಸ್ತಿಗೆ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಎಂದು ಪೌರಾಯುಕ್ತ ಗುರುಸಿದ್ದಯ್ಯ ಹೀರೆಮಠ ಹೇಳಿದರು.

“24 ಗಂಟೆ ಕುಡಿಯುವ ನೀರಿನ ಯೋಜನೆ ಅಪೂರ್ಣವಾಗಿ ನಿಂತಿದೆ. ಗುತ್ತಿಗೆದಾರರು ಕೋರ್ಟ್‌ಗೆ ಹೋಗಿದ್ದಾರೆ. ಇನ್ನೂ ಆರು ಟ್ಯಾಂಕ್‌ಗಳಿಗೆ ನೀರು ಸಂಪರ್ಕ ನೀಡಲಾಗಿದೆ” ಎಂದು ಅವರು ತಿಳಿಸಿದರು.

“ಚಿಕ್ಕಸೂಗೂರು ಮತ್ತು ರಾಂಪೂರು ಜಲಾಶಯದಿಂದ ನೀರು ಪೂರೈಕೆ ಸಮಸ್ಯೆಯಾಗದಂತೆ ಮೋಟಾರ್, ಟಿಸಿ ಖರೀದಿಸಲು 5 ಕೋಟಿ ರೂ. ಅನುದಾನವನ್ನು ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದರು.

ಸಭೆಯಲ್ಲಿ ಮಾನವಿ ಶಾಸಕ ಹಂಪಯ್ಯನಾಯಕ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹಾಗೂ ಯೋಜನಾಧಿಕಾರಿ ಜಗಧೀಶ ಸೇರಿದಂತೆ ನಗರ ಸ್ಥಳೀಯ ಸಂಸ್ಥೇಗಳ ಮುಖ್ಯಾಧಿಕಾರಿಗಳು, ಸಿಬ್ಬಂದಿಗಳಿದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X