ದಾವಣಗೆರೆ | ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆಗೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಹರಿಹರ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತ ದಿಂದ ಯುವಜನ ಕ್ರೀಡಾ ಇಲಾಖೆ ಕಛೇರಿಯವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಪ್ರತಿಭಟಿಸಿದರು.

ಈ ವೇಳೆ ಸಂಘಟನೆಯ ಮುಖಂಡ ಎಸ್. ಗೋವಿಂದ್ ಮಾತನಾಡಿ, “ಹರಿಹರದ ತಾಲೂಕು ಕ್ರೀಡಾಂಗಣದಲ್ಲಿ ನಿರ್ಮಿಸಿರುವ 42ವಾಣಿಜ್ಯ ಮಳಿಗೆಗಳು 2019ನೇ ಸಾಲಿನ ಅವಧಿ ಮುಕ್ತಾಯಗೊಂಡಿದ್ದು, ಇಲ್ಲಿಯವರೆಗೂ ಮರು ಹರಾಜು ಮಾಡಿಲ್ಲ. ಸದರಿ ಮಳಿಗೆಗಳನ್ನು ಕಡಿಮೆ ಬಾಡಿಗೆಗೆ ಪಡೆದು, ಹೆಚ್ಚುವರಿ ಬಾಡಿಗೆಗೆ ಉಪಗುತ್ತಿಗೆ ನೀಡಿರುವ ಮೂಲ ಮಳಿಗೆ ಬಾಡಿಗೆದಾರರು ಸರ್ಕಾರಕ್ಕೆ ವಂಚನೆ ಮಾಡಿದ್ದು, ವಿದ್ಯಾವಂತ  ನಿರುದ್ಯೋಗಿಗಳಿಗೆ ಸ್ವಾವಲಂಭಿ ಉದ್ಯೋಗಕ್ಕೆ ಅವಕಾಶ” ಇಲ್ಲದಂತಾಗಿದೆ.

ಮಳಿಗೆಗಳು ಸಾರ್ವಜನಿಕರಿಗೆ ಅತ್ಯವಶ್ಯಕವಾಗಿರುವುದರಿಂದ ಮರು ಹರಾಜು ಮಾಡುವ ಮೂಲಕ ಸರ್ಕಾರದ ಆದಾಯದ ಜೊತೆಗೆ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿದಂತಾಗುತ್ತದೆ. ಈಗಾಗಲೇ ಮರು ಹರಾಜು ಪ್ರಕ್ರಿಯೆಯನ್ನು ಮಾಡಿ ಅರ್ಜಿಯನ್ನು ಸಹ ನೀಡಲಾಗಿರುತ್ತದೆ.

Advertisements

ಆದರೆ, ಹಾಲಿ ಇರುವ ಮಳಿಗೆಯ ಬಾಡಿಗೆದಾರರು ನ್ಯಾಯಾಲಯದ ದಾವೆ ಹಾಕಿದ ಕಾರಣ ಹರಾಜು ಪ್ರಕ್ರಿಯೆಯು ನಿಲ್ಲಿಸಲಾಗಿತ್ತು.  ಆದರೆ, ನ್ಯಾಯಾಲಯದ ಆದೇಶವಾಗಿ 8-10 ತಿಂಗಳು – ಕಳೆದರೂ ಹರಾಜು ಪ್ರಕ್ರಿಯೆ ಮುಂದುವರೆಸಲು  ಕ್ರೀಡಾಧಿಕಾರಿಗಳು ಆಸಕ್ತಿ ತೋರದ ಕಾರಣ ಹಲವು ಅನುಮಾನಗಳು ಮೂಡಿರುತ್ತವೆ ಎಂದರು.

ಈ ಬಗ್ಗೆ ಆದಷ್ಟು ಬೇಗನೆ ಸೂಕ್ತ ನಿರ್ಧಾರವನ್ನು ಕೈಗೊಂಡು ವಿದ್ಯಾವಂತ ನಿರುದ್ಯೋಗಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

Download Eedina App Android / iOS

X