‘ಚಲೋ ದಿಲ್ಲಿ’ ಬದಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ: ವಿಜಯೇಂದ್ರ

Date:

Advertisements

ಸಮೃದ್ಧ ಕರ್ನಾಟಕ ಮೋದಿ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಟೀಕಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರ ಸರ್ಕಾದ ವಿರುದ್ಧ ಪ್ರತಿಭಟಿಸಲು ಹೊರಟಿದೆ” ಎಂದು ಕಿಡಿಕಾರಿದೆ.

“ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ, ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಕಾಂಗ್ರೆಸ್ ಸರ್ಕಾರದ ಬಂಡವಾಳ ಸಾಕ್ಷಿ ಸಮೇತ ಬಯಲಿಗೆಳೆಯಲಿದೆ” ಎಂದು ತಿಳಿಸಿದ್ದಾರೆ.

Advertisements

“ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ “ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ” ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ. ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್‌ನ ಅಸಲಿ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.

‘ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣ’ದ ಮಹಾ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ, ಅಣ್ಣ ಬಸವಣ್ಣನವರ ಕಾಯಕ ತತ್ವವೇ ಪ್ರೇರಣೆ. ಇದಕ್ಕೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X