ಬೆಂಗಳೂರು | ತಂದೆಯನ್ನು ರಕ್ಷಿಸಲು ಕೊಲೆ ಆರೋಪಿಯಾದ ಮಗ: ತಂದೆ-ಮಗನ ಬಂಧನ

Date:

Advertisements

ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಅಪ್ತಾಪ್ತ ವಯಸ್ಸಿನ ಮಗ ತನ್ನ ತಾಯಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ತಂದೆಯನ್ನು ಕೊಲೆ ಕೇಸ್‌ನಿಂದ ರಕ್ಷಣೆ ಮಾಡಲು ಮಗನೇ ಕೊಲೆ ಆರೋಪವನ್ನು ತನ್ನ ಮೇಲೆ ಎಳೆದುಕೊಂಡು ಶರಣಾಗಿದ್ದ ಎಂಬ ಸಂಗತಿಯನ್ನು ಇದೀಗ ಪೊಲೀಸರು ಭೇದಿಸಿದ್ದಾರೆ.

ಹೌದು, ಅಪ್ರಾಪ್ತ ಬಾಲಕನೊಬ್ಬ ತಾನು ತನ್ನ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದನು. ಪ್ರಕರಣದ ತನಿಖೆ ನಡೆಸಿದ ಕೆ.ಆರ್.ಪುರ ಠಾಣಾ ಪೊಲೀಸರು ಹತ್ಯೆ ಪ್ರಕರಣದ ಸತ್ಯ ಸಂಗತಿಯನ್ನು ಬಯಲು ಮಾಡಿದ್ದಾರೆ.

ಮಹಿಳೆಯನ್ನು ಕೊಲೆ ಮಾಡಲು ಬಳಸಲಾಗಿದ್ದ ಕಬ್ಬಿಣದ ರಾಡ್‌ನಲ್ಲಿ ಎರಡು ವಿಭಿನ್ನ ಫಿಂಗರ್ ಪ್ರಿಂಟ್ ಪತ್ತೆಯಾಗಿದ್ದವು. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿ ರಾಡ್​ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ​ಗೆ ಕಳುಹಿಸಿದ್ದಾರೆ. ಈ ವೇಳೆ ರಾಡ್ ಮೇಲೆ ಇಬ್ಬರ ಫಿಂಗರ್ ಪ್ರಿಂಟ್ ಇರುವುದು ಗೊತ್ತಾಗಿದೆ. ತಂದೆ-ಮಗ ಇಬ್ಬರೂ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಆರೋಪಿ ಪತಿ ಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

Advertisements

ಏನಿದು ಪ್ರಕರಣ?

ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ತಿಂಡಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೆಬ್ರವರಿ 2ರಂದು ಹತ್ಯೆ ನಡೆದಿತ್ತು. ಗಲಾಟೆಯಲ್ಲಿ ತಾಯಿ ನೇತ್ರಾವತಿ (40) ಅವರನ್ನ ರಾಡ್‌ನಿಂದ ಹೊಡೆದು ಕೊಲೆ ಮಾಡಲಾಗಿತ್ತು.

ಮೃತಳ ಮಗ ತಾನೇ ತನ್ನ ತಾಯಿಯನ್ನು ಕೊಲೆ ಮಾಡಿರುವುದಾಗಿ ಶರಣಾಗಿದ್ದನು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಆರಂಭಿಸಿದ ಬಳಿಕ ಸತ್ಯ ಹೊರಬಿದ್ದಿದೆ.

ಮಹಿಳೆಯ ಕೊಲೆಗೆ ಕಾರಣ

ಗಂಡ-ಹೆಂಡತಿ ಮಗ ಮೂವರು ಒಂದೇ ಮನೆಯಲ್ಲಿದ್ದರು. “ಪತ್ನಿ ನೇತ್ರಾವತಿ ವಿವಾಹೇತರ ಸಂಬಂಧ ಹೊಂದಿದ್ದಳು. ಆಕೆಗೆ ಮದ್ಯಪಾನದ ಅಭ್ಯಾಸವಿತ್ತು. ಅಲ್ಲದೇ, ಆಕೆ ಒಮ್ಮೊಮ್ಮೆ ಮನೆ ಬಿಟ್ಟು ಹೋದರೇ ಎರಡು-ಮೂರು ದಿನವಾದರೂ ಮನೆಗೆ ಬರುತ್ತಿರಲಿಲ್ಲ. ಈ ಸಮಯದಲ್ಲಿ ನಾವು ಉಪವಾಸ ಇರಬೇಕಿತ್ತು. ಈ ಬಗ್ಗೆ ನೇತ್ರಾವತಿಗೆ ಪ್ರಶ್ನೆ ಮಾಡಿದರೇ, ನಮ್ಮ ಮೇಲೆಯೇ ಜೋರು ಮಾಡಿ ಜಗಳ ಮಾಡುತ್ತಿದ್ದಳು. ಹಾಗಾಗಿ, ಮಗನ ಜತೆಗೆ ಸೇರಿ ಹತ್ಯೆ ಮಾಡಲು ನಿರ್ಧಾರ ಮಾಡಿದೆ” ಎಂದು ಬಂಧಿತ ಆರೋಪಿ ಚಂದ್ರಪ್ಪ ಒಪ್ಪಿಕೊಂಡಿದ್ದಾನೆ.

ಅಪ್ಪನನ್ನ ರಕ್ಷಿಸೋಕೆ ಜೈಲು ಸೇರಿದ ಮಗ

ತಂದೆ-ಮಗ ಸೇರಿಕೊಂಡು ಮಹಿಳೆಯನ್ನು ಕೊಲೆ ಮಾಡಿದ್ದರು. ಬಳಿಕ, ತಂದೆಯನ್ನ ರಕ್ಷಿಸಲು ಅಪ್ರಾಪ್ತ ಮಗ ಆರೋಪವನ್ನು ತನ್ನ ಮೇಲೆ ಹಾಕಿಕೊಂಡು ಜೈಲಿಗೆ ಸೇರಿದ್ದನು. ಆರೋಪವನ್ನು ಸಾಬೀತು ಮಾಡಲು ತನ್ನ ತಂದೆ ಕೈಯಲಿದ್ದ ರಾಡ್​ ತೆಗೆದುಕೊಂಡು ತಾನೂ ತನ್ನ ತಾಯಿಗೆ ಒಂದೆರಡು ಏಟು ಹೊಡೆದಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೈಲಿಗೆ ಹೋದರೆ ಉತ್ತಮ ಶಿಕ್ಷಣ

“ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತದೆ. ವಿದ್ಯಾಭ್ಯಾಸವನ್ನು ಕೊಡಿಸುತ್ತಾರೆ. ನಾನು ಹೊರಗಡೆ ಬರೋವಷ್ಟರಲ್ಲಿ ನೀನು ಚೆನ್ನಾಗಿ ಹಣ ಮಾಡಿಕೊಂಡಿರು” ಎಂದು ಅಪ್ರಾಪ್ತ ಮಗ ತನ್ನ ತಂದೆಗೆ ಓಲೈಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುವಂತೆ ಆಗ್ರಹ

ಇತ್ತಕಡೆ ನೇತ್ರಾ ಸತ್ತಿರುವುದು ಖಚಿತವಾದ ಬಳಿಕ ಚಂದ್ರಪ್ಪ ಅಲ್ಲಿಂದ ಪರಾರಿಯಾಗಿದ್ದನು. ಮಗ ಪೊಲೀಸರಿಗೆ ಶರಣಾಗಿದ್ದನು. ಸದ್ಯ ಮಗನೊಂದಿಗೆ ಅಪ್ಪನನ್ನು ಸಹ ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X