ಶ್ವಾನಗಳ ಬಗ್ಗೆ ಬಿಜೆಪಿಗೇಕೆ ಇಷ್ಟು ವ್ಯಾಮೋಹ: ಬಿಸ್ಕೆಟ್ ವಿವಾದದ ಬಗ್ಗೆ ರಾಹುಲ್ ಮಾತು

Date:

Advertisements

ಜಾರ್ಖಂಡ್‌ನಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಶ್ವಾನಗಳು ಸೇವಿಸದ ಬಿಸ್ಕೆಟ್‌ಅನ್ನು ಕಾರ್ಯಕರ್ತರಿಗೆ ನೀಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಗೆ ಶ್ವಾನಗಳ ಬಗ್ಗೆ ಇಷ್ಟೇಕೆ ವ್ಯಾಮೋಹ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ಶ್ವಾನ ಹಾಗೂ ಅದರ ಮಾಲೀಕನನ್ನು ಕರೆದೆ. ಆ ಸಂದರ್ಭದಲ್ಲೇ ಶ್ವಾನ ನಿತ್ರಾಣಗೊಂಡು ನಡುಗುತ್ತಿತ್ತು. ನಾನು ಅದಕ್ಕೆ ಆಹಾರ ನೀಡಲು ಪ್ರಯತ್ನಿಸಿದೆ. ಆದರೆ ಅದು ತಿನ್ನದೆ ಭಯಗೊಂಡಿತ್ತು. ನಂತರ ನಾನು ಬಿಸ್ಕೆಟ್‌ಗಳನ್ನು ಶ್ವಾನದ ಮಾಲೀಕನಿಗೆ ನೀಡಿದೆ. ಅನಂತರದಲ್ಲಿ ಮಾಲೀಕನ ಕೈಯಿಂದ ಶ್ವಾನ ಬಿಸ್ಕೆಟ್‌ಅನ್ನು ಸೇವಿಸಿತು. ಇದೇಕೆ ವಿವಾದವಾಗಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಹೇಳಿದರು.

ಈ ವಿಷಯವನ್ನು ವಿವಾದ ಉಂಟು ಮಾಡಿದ ಬಿಜೆಪಿ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಕಾಂಗ್ರೆಸಿನ ಕಾರ್ಯಕರ್ತ ಅಲ್ಲಿ ಎಲ್ಲಿದ್ದರು? ಬಿಜೆಪಿಯವರ ಶ್ವಾನಗಳ ವ್ಯಾಮೋಹದ ಬಗ್ಗೆ ನನಗೆ ಅರ್ಥವಾಗುತ್ತಿಲ್ಲ. ಬಿಜೆಪಿಗೆ ಶ್ವಾನಗಳಿಂದ ಏನು ಸಮಸ್ಯೆಯುಂಟಾಗಿದೆ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಶ್ವಾನಗಳು ತಿನ್ನದ ಬಿಸ್ಕೆಟ್‌ ಅನ್ನು ರಾಹುಲ್‌ ಗಾಂಧಿ ಕಾರ್ಯಕರ್ತರಿಗೆ ತಿನ್ನಿಸಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದರು. ಸ್ವತಃ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, “ರಾಹುಲ್ ಗಾಂಧಿ ಹಾಗೂ ಅವರ ಕುಟುಂಬ ನನ್ನನ್ನು ಬಿಸ್ಕೆಟ್ ತಿನ್ನುವಂತೆ ಮಾಡಲು ಆಗಲಿಲ್ಲ. ನಾನು ಬಿಸ್ಕೆಟ್ ತಿನ್ನುವುದನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದೆ” ಎಂದಿದ್ದರು.

ಬಿಜೆಪಿ ಸೇರ್ಪಡೆಗೂ ಮುನ್ನ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ 1990ರ ದಶಕದಿಂದ 2015ರವರೆಗೆ ಕಾಂಗ್ರೆಸ್‌ನಲ್ಲಿ ಇದ್ದರು. 2015ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X