ರಾಯಚೂರು | ಕೇಂದ್ರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆ ಅನುದಾನ ಕಡಿತ; ಪ್ರತಿಕೃತಿ ದಹಿಸಿ ಪ್ರತಿಭಟನೆ

Date:

Advertisements

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಗೆ ಅನುದಾನ ಕಡಿತ, ಗೌರವಧನ ಹೆಚ್ಚಿಸದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಕೇಂದ್ರ ಸರ್ಕಾರ ಘೋಷಣೆ ಮಾಡಿದ ಯೋಜನೆಗಳು ಕೇವಲ ಘೋಷಣೆಗಳಲ್ಲಿ ಮಾತ್ರ ಇದೆ. ಅನುದಾನವಿಲ್ಲದೆ ಸಮರ್ಪಕ ಅನುಷ್ಠಾನಗೊಳಿಸಲು ಹಿನ್ನಡೆಯಾಗುತ್ತಿದೆ ಎಂದು ದೂರಿದರು. ರಾಮ ರಾಜ್ಯ ಎನ್ನುವ ಸರ್ಕಾರ ಹಸಿವಿನ ಸೂಚ್ಯಾಂಕ ಸ್ಥಾನದಿಂದ ಭಾರತವನ್ನು ಮೇಲೆತ್ತಲು ಯೋಜನೆಗೆ ಅನುದಾನ ನೀಡದೇ ಯಾವ ಪ್ರಯತ್ನವನ್ನು ಬಜೆಟ್‌ನಲ್ಲಿ ಮಾಡಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಐಸಿಡಿಎಸ್‌ನಲ್ಲಿ 21,521.13 ಕೋಟಿಯಿಂದ 21,200 ಕೋಟಿಗೆ ಮಧ್ಯಂತರ ಬಜೆಟ್‌ನಲ್ಲಿ 300 ಕೋಟಿಗಿಂತ ಹೆಚ್ಚು ಬಜೆಟ್ ಕಡಿತ ಮಾಡಲಾಗಿದೆ. ಅನುದಾನ ಕಡಿತದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ವೇತನ ವಿಳಂಬ, ಬಾಡಿಗೆ ಪಾವತಿ, ಪೌಷ್ಠಿಕ ಆಹಾರಕ್ಕಾಗಿ ಹಣ ಬಿಡುಗಡೆ ನಿಗದಿತವಾಗಿ ಬಿಡುಗಡೆಯಾ ಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಬಜೆಟ್ ಕಡಿತಗೊಳಿಸುವ ಪರಿಕಲ್ಪನೆಯಿರುವ ಸರ್ಕಾರ 2 ಕೋಟಿ ತಾಯಂದಿರು, 8 ಕೋಟಿ ಮಕ್ಕಳ ಆರೋಗ್ಯ, ಆಹಾರ, ಶಿಕ್ಷಣದ ಹಕ್ಕನ್ನು ಕಾಪಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.ಕಳೆದ 5 ವರ್ಷಗಳಲ್ಲಿ 1 ರೂ. ಅನುದಾನ, ವೇತನ ಹೆಚ್ಚಳ ಮಾಡದೆ ಸಬ್ ಕಾ ವಿಕಾಸ್ ಎಂದರೆ ವಿಕಾಸ್ ವಾಗುತ್ತಿದೆಯೇ, ಸರ್ಕಾರದ ಈ ಧೋರಣೆಯನ್ನು ಖಂಡಿಸಿದರು. ಐಸಿಡಿಎಸ್ ಯೋಜನೆಗೆ ಖಡಿತಗೊಳಿಸಿರುವ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸಿದರು.

ಈ ಸಂದರ್ಭದಲ್ಲಿ  ಅಧ್ಯಕ್ಷೆ ಎಚ್.ಪದ್ಮಾ, ತಾಲೂಕಾ ಕಾರ್ಯದರ್ಶಿ ನರ್ಮದಾ, ಕೆ.ಜಿ.ವೀರೇಶ, ಡಿ.ಎಸ್. ಶರಣ ಬಸವ, ಗೋಕುರಮ್ಮ, ಪಾರ್ವತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X