ಬೆಂಗಳೂರು | ಐಷಾರಾಮಿ ಕಾರು ಕೊಡಿಸುವುದಾಗಿ ವೈದ್ಯರೊಬ್ಬರಿಗೆ ನಂಬಿಸಿ ₹6 ಕೋಟಿ ವಂಚನೆ

Date:

Advertisements

ವೈದ್ಯರೊಬ್ಬರಿಗೆ ‍ಐಷಾರಾಮಿ ಕಾರು ಕೊಡಿಸುವುದಾಗಿ ನಂಬಿಸಿ, ಮಹಿಳೆಯೊಬ್ಬರು ಬರೋಬ್ಬರಿ ₹6 ಕೋಟಿ ವಂಚನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಿರೀಶ್ ಮೋಸ ಹೋದ ವೈದ್ಯ. ಐಶ್ವರ್ಯ ಗೌಡ ಆರೋಪಿ. ಸದ್ಯ ಈ ಬಗ್ಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

Advertisements

ಗಿರೀಶ್ ಅವರು ವೈದ್ಯರಾಗಿದ್ದು, ಇವರ ಬಳಿ ಆರೋಪಿ ಐಶ್ವರ್ಯ ಗೌಡ ಕಾಸ್ಮೆಟಿಕ್ ಸರ್ಜರಿ ಮಾಡಿಸಲು 2022ರ ಮಾರ್ಚ್‌ನಲ್ಲಿ ಬಂದಿದ್ದಳು. ಆಗ ವೈದ್ಯರಿಗೂ ಆರೋಪಿಗೂ ಪರಿಚಯವಾಗಿದೆ.

ಈ ವೇಳೆ, ಆರೋಪಿ ಐಶ್ವರ್ಯ ತಾನು ರಿಯಲ್​ ಎಸ್ಟೇಟ್​ ಫೈನಾನ್ಸ್​​ ನಡೆಸುತ್ತಿದ್ದು, ಸೆಕೆಂಡ್​​ ಹ್ಯಾಂಡ್​​ ಕಾರುಗಳ ವ್ಯವಹಾರ ಸಹ ನಡೆಸುತ್ತಿದ್ದೇನೆ ಎಂದು ಪರಿಚಯ ಮಾಡಿಕೊಂಡಿದ್ದಳು.

ಗಿರೀಶ್ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಖರೀದಿ ಮಾಡಲು ಯೋಚಿಸುತ್ತಿದ್ದಾಗ ಮಹಿಳೆಯನ್ನು ಸಂಪರ್ಕ ಮಾಡಿದ್ದಾರೆ. ಆರೋಪಿ ಕಡಿಮೆ ಬೆಲೆಗೆ ಐಷಾರಾಮಿ ಕಾರ್ ಕೊಡಿಸುವುದಾಗಿ ನಂಬಿಸಿ, ವೈದ್ಯರ ಬಳಿಯಿಂದ ಮೊದಲನೆಯದಾಗಿ ₹2 ಕೋಟಿ 75 ಲಕ್ಷ ಹಣವನ್ನು ಆನ್​ಲೈನ್​ ಮೂಲಕ ಪಾವತಿ ಮಾಡಿಸಿಕೊಂಡಿದ್ದಾಳೆ. ಅಲ್ಲದೇ, ₹3 ಕೋಟಿ 25 ಲಕ್ಷ ನಗದಾಗಿ ಪಡೆದುಕೊಂಡಿದ್ದಾಳೆ.

ಹಣ ಪಡೆದು ತುಂಬಾ ದಿನಗಳಾದರೂ ಕಾರನ್ನು ಕೊಡಿಸದ ಆಕೆಯ ಮೇಲೆ ಅನುಮಾನಗೊಂಡ ಗಿರೀಶ್ “ಕಾರನ್ನು ಕೊಡಿಸದಿದ್ದರೇ, ಹಣ ವಾಪಸ್ ನೀಡಿ” ಎಂದು ಕೇಳಿದ್ದಾರೆ. ಆ ಸಮಯದಲ್ಲಿ ಕೊಡುವುದಾಗಿ ಸಬೂಬು ಹೇಳಿ ಮುಂದೂಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ನಾಪತ್ತೆ ಪ್ರಕರಣ ಶೇ.34 ರಷ್ಟು ಏರಿಕೆ

ವೈದ್ಯ ಡಿಸೆಂಬರ್‌ನಲ್ಲಿ ಹಣ ತಿರುಗಿಸುವಂತೆ ಕೇಳಿದಾಗ, ಆರೋಪಿ ಐಶ್ವರ್ಯ ವಿಜಯನಗರ ಕ್ಲಬ್ ಹತ್ತಿರ ಬರಲು ತಿಳಿಸಿದ್ದಾಳೆ. ಅದರಂತೆ ಗಿರೀಶ್ ಮತ್ತು ಅವರ ಪತ್ನಿ ಕ್ಲಬ್ ಹತ್ತಿರ ಹೋದಾಗ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾಳೆ. ಅಲ್ಲದೇ, ಪದೇಪದೆ ಹಣ ಕೇಳಿದರೆ, ಅತ್ಯಾಚಾರದ ದೂರು ಕೊಡುತ್ತೇನೆ ಎಂದು ಹೆದರಿಕೆ ಹಾಕಿದ್ದಾರೆ.

ಇಷ್ಟೇ ಅಲ್ಲದೇ, ಈ ವಿಷಯವನ್ನು ಕೈ ಬಿಡಬೇಕಾದರೆ ₹5 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ವೈದ್ಯರಿಂದ ಪುನಃ ₹2 ಲಕ್ಷ ಹಣ ಸುಲಿಗೆ ಮಾಡಿದ್ದಾರೆ ಎಂದು ವೈದ್ಯರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X