ವಿಜಯಪುರ | ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳಿಂದ ಹಣ ಸಹಾಯಕ್ಕೆ ಸರ್ಕಾರ ಆದೇಶ; ಎಐಡಿಎಸ್‌ಒ ಖಂಡನೆ

Date:

Advertisements

ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಹಣ ಸಹಾಯವನ್ನು ಪಡೆಯಲು ಸರ್ಕಾರ ಆದೇಶ ನೀಡಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದು ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶದ ಕುರಿತು ಪತ್ರಿಕೆ ಹೇಳಿಕೆ ನೀಡಿದ್ದು, “ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ಸ್ಥಾಪಿಸಿ, ಶಾಲೆಯ ಪೀಠೋಪಕರಣ, ಶೌಚಾಲಯ ನಿರ್ಮಾಣ, ಪ್ರಯೋಗಾಲಯಗಳ ಅಭಿವೃದ್ಧಿ, ಗ್ರಂಥಾಲಯ ನಿರ್ಮಾಣ ಸೇರಿದಂತೆ ಶಾಲೆಗಳ ಮೂಲ ಸೌಕರ್ಯಗಳನ್ನು ನಿರ್ಮಿಸಲು ಹಾಗೂ ನಿರ್ವಹಿಸಲು ಹಳೆಯ ವಿದ್ಯಾರ್ಥಿಗಳ ಮೂಲಕ ದೇಣಿಗೆ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶವು, ಸರ್ಕಾರಿ ಶಾಲೆಗಳ ನಿರ್ವಹಣೆಯಿಂದ ಸಂಪೂರ್ಣವಾಗಿ ನುಣುಚಿಕೊಳ್ಳುವ ಯತ್ನವಾಗಿದೆ” ಎಂದು ಹೇಳಿದರು.

“ತೀವ್ರ ಸೌಕರ್ಯಗಳ ಕೊರತೆಯಿಂದ ಈಗಾಗಲೇ ನಲುಗುತ್ತಿರುವ ರಾಜ್ಯದ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಸರ್ಕಾರದ ಮೂಲ ಜವಾಬ್ದಾರಿಯಾಗಬೇಕಿತ್ತು. ಆದರೆ, ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ಈ ನಿರ್ವಹಣೆಯ ಜವಾಬ್ದಾರಿಯನ್ನು ವರ್ಗಾಯಿಸಲು ಸರ್ಕಾರ ನಿರ್ಧರಿಸಿರುವುದು ಅತ್ಯಂತ ಖಂಡನೀಯ. ಹೀಗಾದಲ್ಲಿ, ಶಾಲೆಗಳಲ್ಲಿನ ಮೂಲ ಸೌಕರ್ಯಗಳ ಕೊರತೆಗೆ, ಸರ್ಕಾರದ ಹೊಣೆಗಾರಿಕೆ ಇರುವುದಿಲ್ಲ. ಜೊತೆಗೆ, ಶಾಲಾ ಮಕ್ಕಳಿಗೆ ರಾಗಿಗಂಜಿ ನೀಡಲು, ಕಾರ್ಪೊರೇಟ್ ಕಂಪನಿಗಳ ದೇಣಿಗೆ (ಸಿಎಸ್‌ಆರ್‌) ಹಣವನ್ನು ಬಳಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ. ಅಲ್ಲಿಗೆ, ಸಂಪೂರ್ಣವಾಗಿ ಸರ್ಕಾರಿ ಶಾಲೆಗಳ ನಿರ್ವಹಣೆಯ ನೈತಿಕ ಜವಾಬ್ದಾರಿಯಿಂದ ಸರ್ಕಾರ ಕೈ ತೆಗೆಯುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ಬಿಜೆಪಿಗರ ದಾಂಧಲೆ

“ಕ್ರಮೇಣವಾಗಿ ಬಜೆಟ್‌ನಲ್ಲಿ ಹಣ ಬಿಡುಗಡೆ ಕಡಿತಗೊಳಿಸಿ, ಇದೀಗ ಅವಶ್ಯವಿರುವ ಮೊತ್ತವನ್ನು ಇತರೆ ಮೂಲಗಳಿಂದ ಪಡೆಯಲು ಆದೇಶ ನೀಡುತ್ತಿರುವುದು ಸರ್ಕಾರದ ಧೋರಣೆಯನ್ನು ತೋರುತ್ತಿದೆ. ಅದರಲ್ಲೂ ರಾಜ್ಯ ಬಜೆಟ್ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇಂತಹ ಆದೇಶಗಳು, ಬಜೆಟ್‌ನಲ್ಲಿ ಏನನ್ನು ಅಪೇಕ್ಷೆ ಮಾಡಬಾರದು ಎಂಬುದನ್ನು ತೋರಿಸುತ್ತಿದೆ. ಹಳೆಯ ವಿದ್ಯಾರ್ಥಿ ಸಂಘಗಳು ಯಾವುದೇ ದೇಣಿಗೆಯನ್ನು ಸ್ವಯಂ ಪ್ರೇರಣೆಯಿಂದ ನೀಡಿದಲ್ಲಿ, ಅವುಗಳ ಶಾಲೆಗಳ ಮತ್ತಷ್ಟು ಅಭಿವೃದ್ಧಿಗೆ ಬಳಕೆಯಾಗಬೇಕೇ ಹೊರತು, ಆ ಹಣವನ್ನೇ ಶಾಲೆಯ ನಿರ್ವಹಣಾ ವೆಚ್ಚದ ಮೂಲವನ್ನಾಗಿ ಪರಿಗಣಿಸುವ ವಿದ್ಯಾರ್ಥಿ ವಿರೋಧಿ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಬಸವಲಿಂಗ ಪಟ್ಟದ್ದೇವರು ಸುದೈವಿ ಮಕ್ಕಳ ಪೋಷಕರು : ನವೀಲಕುಮಾರ್ ಉತ್ಕಾರ್

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ,...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

Download Eedina App Android / iOS

X