ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

Date:

Advertisements
  • ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ
  • ಕೋಲಾರ ಕ್ಷೇತ್ರದಿಂದ ಹಿಂದೆ ಸರಿ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಿರೀಕ್ಷೆಯಂತೆಯೇ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ ಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

Advertisements

ಜೆಡಿಎಸ್ ತೊರೆದು ‘ಕೈ’ ಹಿಡಿದಿದ್ದ ಶಿವಲಿಂಗೇಗೌಡ ಅವರಿಗೆ ಅರಸೀಕೆರೆ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ರಾಯಭಾಗ ಬೆಳಗಾವಿ ಉತ್ತರ ಕ್ಷೇತ್ರದಿಂದ ಆಸೀಫ್‌ ಸೇಠ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ರೇವು ನಾಯ್ಕ್‌ ಬೆಳಮಗಿ, ಮಾನ್ವಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಹಂಪಯ್ಯ ನಾಯಕ, ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಸಿದ್ದಪ್ಪ ಕೊನ್ನೂರು ಅವರ ಹೆಸರು ‘ಫೈನಲ್’ ಆಗಿದೆ. ನವಲಗುಂದಾ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಬಂದಿದ್ದ ಎನ್‌ ಎಚ್‌ ಕೋನರೆಡ್ಡಿ ಅವರಿಗೆ ನಿರೀಕ್ಷೆಯಂತೆಯೇ ಟಿಕೆಟ್ ಲಭಿಸಿದೆ.

ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಜಿ ಬಿ ಮಾಲತೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.ಕಾಂಗ್ರೆಸ್ ಪಟ್ಟಿ 1

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X