ಎಲ್‌ ನಿನೋ ಪರಿಣಾಮ; ರಾಜ್ಯದಲ್ಲಿ ಫೆಬ್ರವರಿಯಲ್ಲೇ ಬೇಸಿಗೆ

Date:

Advertisements

ಬೇಸಿಗೆ ಕಾಲ ಇನ್ನೂ ಆರಂಭವಾಗಿಲ್ಲ. ಆದರೂ, ಈಗಾಗಲೇ ಬೇಸಿಗೆಯ ರೀತಿಯಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು (33.3°) ಹೆಚ್ಚಾಗಿದೆ. ಉತ್ತರ ಒಳಭಾಗ ಮತ್ತು ಕರಾವಳಿ ಕರ್ನಾಟಕದಲ್ಲಿ ಹವಾಮಾನ ಒಂದೇ ರೀತಿಯಿದೆ. ಈ ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2° ಹೆಚ್ಚಾಗಿದೆ ಎಂದು ವರದಿಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳುವಂತೆ, ‘ಎಲ್‌ ನಿನೋ’ ಪರಿಣಾಮದಿಂದಾಗಿ ತಾಪಮಾನ ಹೆಚ್ಚಾಗಿದೆ. ಆಗಸ್ಟ್‌ ವೇಳೆಗೆ ಎಲ್‌ ನಿನೋ ತಟಸ್ಥವಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಆರ್ದ್ರ ವಾತಾವರಣವಿದೆ. ನಗರದಲ್ಲಿ ಗರಿಷ್ಠ ತಾಪಮಾನ 33.1° ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18.1° ಸೆಲ್ಸಿಯಸ್ ಇದೆ. ಇದು, ಈ ಸಮಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 30.9° ಸೆಲ್ಸಿಯಸ್ ಮತ್ತು ಕನಿಷ್ಠ 17.6° ಸೆಲ್ಸಿಯಸ್ ಆಗಿರಬೇಕಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisements

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.1° (ಗರಿಷ್ಠ) ಮತ್ತು 15.9° (ಕನಿಷ್ಠ) ಸೆಲ್ಸಿಯಸ್ ಮತ್ತು ಹಳೆಯ ವಿಮಾನ ನಿಲ್ದಾಣದಲ್ಲಿ 32.9° (ಗರಿಷ್ಠ) ಮತ್ತು 15° (ಕನಿಷ್ಠ) ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ಹೇಳಿದೆ.

”ದಕ್ಷಿಣ ಒಳನಾಡು ಭಾಗಗಳ ಕೆಲವು ಪ್ರದೇಶಗಳು, ಕರಾವಳಿ ಕರ್ನಾಟಕದ ಉಡುಪಿ, ಕಾರವಾರ ಹಾಗೂ ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಕನಿಷ್ಠ 2° ಸೆಲ್ಸಿಯಸ್ ಹೆಚ್ಚಾಗಿದೆ” ಎಂದು ಇಲಾಖೆ ತಿಳಿಸಿದೆ.

ಗಮನಾರ್ಹ ವಿಚಾರವೆಂದರೆ, ಮಾರ್ಚ್ 1ಅನ್ನು ಅಧಿಕೃತವಾಗಿ ಬೇಸಿಗೆಯ ಆರಂಭವೆಂದು ಪರಿಗಣಿಸಲಾಗಿದೆ. ಸಾಮಾನ್ಯವಾಗಿ ಫೆಬ್ರವರಿ ಮೂರನೇ ವಾರದ ನಂತರ ಬೇಸಿಗೆಯ ಪರಿಸ್ಥಿತಿ ಕಂಡುಬರುತ್ತದೆ. ಆದರೆ, ಈ ವರ್ಷ ಈಗಾಗಲೇ ಬೇಸಿಗೆಯ ಅನುಭವವಾಗುತ್ತಿದೆ. ಇದಕ್ಕೆ ಎಲ್‌ ನೀನೋ ಕಾರಣವೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ...

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

Download Eedina App Android / iOS

X