ಕೋಲಾರ ಕೈಬಿಟ್ಟ ಸಿದ್ದರಾಮಯ್ಯ; ವರುಣಾ ಫೈನಲ್‌

Date:

Advertisements
  • ತವರು ನೆಲ ವರುಣಾ ಕ್ಷೇತ್ರವನ್ನೇ ಫೈನಲ್‌ ಮಾಡಿಕೊಂಡ ಸಿದ್ದರಾಮಯ್ಯ
  • ಕೋಲಾರಕ್ಕೆ ಡಿಕೆಶಿ ಆಪ್ತ ಕೊತ್ತೂರು ಮಂಜುನಾಥ್‌ ಹೆಸರು ಘೋಷಣೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂತಿಮವಾಗಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಸಿದ್ದರಾಮಯ್ಯ ಈಗ ಕೋಲಾರ ಕೈಬಿಟ್ಟು, ತವರು ನೆಲ ವರುಣಾ ಕ್ಷೇತ್ರವನ್ನು ಫೈನಲ್‌ ಮಾಡಿದ್ದಾರೆ.

ಕಾಂಗ್ರೆಸ್‌ ಶನಿವಾರ ಬಿಡುಗಡೆ ಮಾಡಿದ ಅಂತಿಮ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದಿಂದ ಡಿ ಕೆ ಶಿವಕುಮಾರ್‌ ಆಪ್ತ ಕೊತ್ತೂರು ಮಂಜುನಾಥ್‌ ಹೆಸರು ಘೋಷಿಸಲಾಗಿದೆ.  

Advertisements

ಸಿದ್ದರಾಮಯ್ಯ ಅವರ ಆಪ್ತರೊಬ್ಬರು ಈ ದಿನ.ಕಾಮ್‌ ಜೊತೆ ಮಾತನಾಡಿ, “ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಯಾವುದೇ ಗೊಂದಲ ಇಲ್ಲದೇ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ. ಎರಡನೇ ಕ್ಷೇತ್ರಕ್ಕೆ ಸಿದ್ದರಾಮಯ್ಯ ನಿಂತರೆ ವರುಣಾ ಮತದಾರರಿಗೂ ತಪ್ಪು ಸಂದೇಶ ರವಾನೆಯಾಗುತ್ತದೆ. ಈ ಎಲ್ಲ ಕಾರಣಕ್ಕೆ ಕೋಲಾರ ಕ್ಷೇತ್ರವನ್ನು ಸಿದ್ದರಾಮಯ್ಯ ಅವರು ಕೈಬಿಟ್ಟಿದ್ದಾರೆ” ಎಂದು ತಿಳಿಸಿದರು.

ಈಗಾಗಲೇ ತಮ್ಮ ಆಪ್ತರಾದ ಕೆ ಜೆ ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಹಿತೈಷಿಗಳ ಜೊತೆ ಸಿದ್ದಾಮಯ್ಯ ಚರ್ಚಿಸಿದ್ದು, “ವರುಣಾ ಕ್ಷೇತ್ರ ಸುರಕ್ಷಿತವಾಗಿದೆ. ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ” ಎಂದು ಖಚಿತ ಮೂಲಗಳು ಸ್ಪಷ್ಟಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X