ಶಿವಮೊಗ್ಗ | ಸಮಯಪಾಲನೆ ಮಾಡದ ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಧರಣಿ

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಒತ್ತಾಯಿಸಿದ್ದಾರೆ.

ವೈದ್ಯರ ವರ್ಗಾವಣೆ ಮತ್ತು ಆಸ್ಪತ್ರೆಯಲ್ಲಿ ವ್ಯವಸ್ಥಿತ ಕಾರ್ಯನಿರ್ವಹಣೆಗೆ ಆಗ್ರಹಿಸಿ ಫೆ.19ರಿಂದ ನ್ಯಾಯ ದೊರಕುವವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ದರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಹೇಳಿದ್ದಾರೆ.

ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದೆ ಇರುವುದನ್ನು ಖಂಡಿಸಿ 2022ರ ಸೆಪ್ಟೆಂಬರ್‌ನಲ್ಲಿ ಪ್ರತಿಭಟನೆ ನಡೆಸಿದ್ದೆವು. ತಾಲೂಕು ಆರೋಗ್ಯ ಅಧಿಕಾರಿಗೆ ವಿಡಿಯೋ ಸಮೇತ ಸಾಕ್ಷ್ಯಗಳನ್ನು ಒದಗಿಸಿದ್ದೆವು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೂ ಹಕ್ಕೊತ್ತಾಯ ಸಲ್ಲಿಸಿದ್ದೆವು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

Advertisements

ಆಸ್ಪತ್ರೆಯ ವೈದ್ಯೆ ಗಾಯತ್ರಿ ಅವರು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವ ವಿಚಾರವನ್ನು ಆರೋಗ್ಯ ಅಧಿಕಾರಿ ಸಮರ್ಥಿಸಿಕೊಂಡು ತಪ್ಪು ವರದಿಯನ್ನು ತಮ್ಮ ಮೇಲಾಧಿಕಾರಿಗೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X