ಅಪಾರ್ಟ್ಮೆಂಟ್ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
“ಶೋಭಾ ಅರೆನಾ ಅಪಾರ್ಟ್ಮೆಂಟ್ನಲ್ಲಿ ಕುಡಿಯಲು ನಮಗೆ ಸಿಗುತ್ತಿರುವ ನೀರಿನ ಗುಣಮಟ್ಟವನ್ನು ದಯವಿಟ್ಟು ನೋಡಿ. ದಯಮಾಡಿ ನಮಗೆ ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯರಸ್ತೆಯಲ್ಲಿ ಕಾವೇರಿ ನೀರು ಕೊಡಿ” ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
“ಇತರ ನಿವಾಸಿಗಳು ತಮ್ಮ ಮನೆಗೆ ಬರುತ್ತಿರುವ ಕಲುಷಿತ ನೀರಿನ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ನಮ್ಮ ಅಪಾರ್ಟ್ಮೆಂಟ್ ಶೋಭಾ ಅಖಾಡ, ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯ ರಸ್ತೆಗೆ ಕಾವೇರಿ ನೀರು ಬೇಕು” ಎಂದಿದ್ದಾರೆ.
ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಲಮಂಡಳಿ ಮುಖ್ಯಸ್ಥರು, ಬೆಂಗಳೂರು ಪೊಲೀಸ್ ಸೇರಿದಂತೆ ಹಲವು ಅಧಿಕಾರಿಗಳನ್ನು ಟ್ಯಾಗ್ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಫೆಬ್ರುವರಿ 7ರಂದು ಈ ವಿಡಿಯೋ ಶೇರ್ ಮಾಡಲಾಗಿದೆ. ಈ ವಿಡಿಯೋವನ್ನು ಸುಮಾರು 2 ಲಕ್ಷದ 76 ಸಾವಿರ ಜನರು ವಿಕ್ಷಣೆ ಮಾಡಿದ್ದಾರೆ.
ಈ ವಿಡಿಯೋಗೆ ಹಲವು ಜನ ಕಮೆಂಟ್ ಮಾಡಿದ್ದು, “ಇದು ಟ್ಯಾಂಕ್ ಸ್ವಚ್ಛಗೊಳಿಸಿದ ನಂತರದ ನೀರು. ಆದ್ದರಿಂದಲೇ ನೀರಿನ ಬಣ್ಣ ಕಂದು ಬಣ್ಣದಿಂದ ಬಿಳಿ ಬಣ್ಣಕ್ಕೆ ಬದಲಾಗುತ್ತಿತ್ತು. ವೀಡಿಯೊವನ್ನು ಸ್ವಲ್ಪ ಹೆಚ್ಚು ವಿಸ್ತರಿಸಿದ್ದರೆ, ನೀರಿನ ಬಣ್ಣವು ಸ್ಪಷ್ಟವಾಗುತ್ತಿತ್ತು” ಎಂದು ಅರ್ಬನ್ ಪಿಕ್ಸೆಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್ನಲ್ಲಿ ‘ಮುದ್ದೆ ಭಾಗ್ಯ’
“ಒಂದು ಕ್ಷಣ, ಅವರು ಮನೆಗೆ ಸಾಂಬಾರ್ ಅನ್ನು ನಲ್ಲಿಯ ಮೂಲಕ ಸರಬರಾಜು ಮಾಡುತ್ತಾರೆ ಎಂದು ನಾನು ಭಾವಿಸಿದೆ. ದುರದೃಷ್ಟಕರ” ಎಂದು ವಿನಯ್ ಎಂಬ ಹೆಸರಿನ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.
Dear @CMofKarnataka, @DKShivakumar, @BBMPCOMM, Please see the quality of water we are getting in Sobha Arena Apartment for Drinking. Please give us Cauvery Water at Judicial Layout, Thalagattapura, Kanakapura Main Road. @KA_HomeBuyers @chairmanbwssb @BlrCityPolice @SobhaLtd pic.twitter.com/rn8yUzSuWz
— Dhananjaya Padmanabhachar (@Dhananjaya_Bdvt) February 7, 2024